ಕೊಳ್ಳೇಗಾಲ : ಅಗರ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಮುಡಿಗುಂಡ ಸೇತುವೆಯ ಬಳಿ ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 280 ಗ್ರಾಮ್ ಒಣಗಾಂಜಾವನ್ನು ಭಾನುವಾರ ಜಪ್ತಿ ಮಾಡಿದ್ದಾರೆ. ಬಾಗಳಿ ಗ್ರಾಮದ ಕರಿಯಪ್ಪ ಎನ್ನುವರ ಮಗನಾದ ನಿಂಗರಾಜು ಬಂಧಿತ ಆರೋಪಿ. ಈತ ಸಾರ್ವಜನಿಕರಿಗೆ ಒಣಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಎಸ್ಐ ಕರಿಬಸಪ್ಪ ಹಾಗೂ ಡಿವೈಎಸ್ಪಿ ಅಪರಾಧ ಪತ್ತೆದಳದ ಸಿಬ್ಬಂದಿಗಳು ದಾಳಿ ನಡೆಸಿ ಒಣಗಾಂಜಾ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನು ಓದಿ : ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ
ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಬಂಧಿತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ದಾಳಿಯಲ್ಲಿ ಡಿವೈಎಸ್ಪಿ ಅಪರಾಧ ಪತ್ತೆದಳದ ಎಎಸ್ಐ ತಖೀಉಲ್ಲಾ, ಹೆಚ್.ಸಿ.ಗಳಾದ ರವಿಕುಮಾರ್, ಬಿಳಿಗೌಡ, ವೆಂಕಟೇಶ್, ಕಾನ್ಸಟೇಬಲ್ ಶಿವಕುಮಾರ್, ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಹೆಚ್.ಸಿ ಪರಶಿವಮೂರ್ತಿ, ಕಾನ್ಸಟೇಬಲ್ ಶಿವಕುಮಾರ್, ಶ್ರೀಶೈಲ, ದರ್ಶನ, ಚಾಲಕ ಮಲ್ಲೇಶ್ ಇದ್ದರು
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…