ಹನೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ರಾಮಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುತ್ತುಶೆಟ್ಟಿಯೂರು ಗ್ರಾಮದ ಸೇಟು, ವಿಜಯ್ ಅಲಿಯಾಸ್ ವಿಜಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆ ವಿವರ: ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜೀಪುರ ಗ್ರಾಮದ ಕಡೆಯಿಂದ ಮಂಚಾಪುರ ಗ್ರಾಮದ ಹೊರವಲಯದಲ್ಲಿನ ಉಡುತೊರೆ ಜಲಾಶಯದ ಚಾನೆಲ್ ರಸ್ತೆ ಮಾರ್ಗವಾಗಿ ರಾಮಾಪುರ ಗ್ರಾಮದ ಕಡೆಗೆ ದ್ವಿಚಕ್ರ ವಾಹನದಲ್ಲಿ ಶ್ರೀಗಂಧದ ತುಂಡುಗಳನ್ನು ಆರೋಪಿಗಳು ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಉಪವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಹಾಗೂ ಪ್ರಭಾರ ಇನ್ಸ್ಪೆಕ್ಟರ್ ಶಶಿಕುಮಾರ್ ಅವರ ಮಾರ್ಗದರ್ಶನದಲ್ಲಿ ರಾಮಾಪುರ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಸಬ್ ಇನ್ಸ್ಪೆಕ್ಟರ್ ಈಶ್ವರ್, ಅಪರಾಧ ವಿಭಾಗದ ಲೋಕೇಶ್ ರವರು ದಾಳಿ ನಡೆಸಿ ಸ್ಕೂಟಿ ಮಾದರಿಯ ಮೊಫೆಡ್ ಮೋಟಾರ್ ಬೈಕ್ ನಲ್ಲಿ ಸಾಗಾಟ ಮಾಡುತ್ತಿದ್ದ 75,000 ಸಾವಿರ ಮೌಲ್ಯದ 15 ಕೆಜಿ 30 ಗ್ರಾಂ ಶ್ರೀಗಂಧದ 36 ತುಂಡುಗಳು, 350 ಗ್ರಾಂ ತೂಕದ ಶ್ರೀಗಂಧದ ಚೆಕ್ಕೆಗಳನ್ನು ಮಾಲು ಸಮೇತ ವಶಕ್ಕೆ ಪಡೆದುಕೊಂಡು, ಪ್ರಕರಣ ದಾಖಲಿಸಿದ್ದಾರೆ.
ದಾಳಿಯಲ್ಲಿ ಮುಖ್ಯಪೇದೆ ಸಿದ್ದೇಶ್ ಕುಮಾರ್, ಲಿಯಾಖತ್ ಅಲಿಖಾನ್, ಮಹೇಂದ್ರ, ಗಿರೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…