ಹನೂರು : ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ಶಾಖೆಯ ಹೊಳೆಮುರದಟ್ಟಿ ಗಸ್ತಿನ ಕಿರಬನಕಲ್ಲು ಅರಣ್ಯ ಪ್ರದೇಶದಲ್ಲಿ ಆಗಸ್ಟ್ 12 ರಂದು ಎರಡು ಹುಲಿ ಮರಿಗಳ ಸಾವು ಮಾಸುವ ಮುನ್ನವೇ ಚಿರತೆಯ ಕಳೇಬರ ಪತ್ತೆಯಾಗಿರುವುದು ವನ್ಯಜೀವಿ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ.
ಹನೂರು ವಲಯದ ಬಂಡಳ್ಳಿ ಶಾಖೆಯ ಮೇಕೆದಾಟು ಗಸ್ತಿನ ತಮ್ಮಡಿ ಬಾವಿ ಹಳ್ಳ ಕಾಡು ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗಸ್ತು ತಿರುಗುವಾಗ ಅಂದಾಜು 5 ವರ್ಷದ ಹೆಣ್ಣು ಚಿರತೆಯ ಕಳೆಬರ ಪತ್ತೆಯಾಗಿದೆ. ಮೃತ ಚಿರತೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದು, ಚಿರತೆಯ ಹಿಂಗಾಲುಗಳ ಪಾರ್ಶ್ವ ವಾಯುವಿನಿಂದ ಸ್ವಾಧೀನ ಕಳೆದುಕೊಂಡಿವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಅನಾರೋಗ್ಯವೆಂದು ಭಾವಿಸಿದರೂ ಚಿರತೆಯ ಸಾವಿನ ನಿಖರ ಕಾರಣ ತಿಳಿಯಲು ಪ್ರಮುಖ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಮರಣೋತ್ತರ ಪರೀಕ್ಷೆಯ ಬಳಿಕ ಎನ್ಟಿಸಿಎ ಸದಸ್ಯರನ್ನೊಳಗೊಂಡ ತಂಡದ ಸಮ್ಮುಖದಲ್ಲಿ ಚಿರತೆಯ ಮೃತದೇಹವನ್ನು ನಿಯಮಾನುಸಾರ ಸುಡಲಾಯಿತು ಎಂದು ಕಾವೇರಿ ವನ್ಯಜೀವಿ ವಲಯದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಳು ಹುಲಿಗಳ ಸಾವು: ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 2025ರ ಜೂನ್ 26ರಂದು ಒಂದು ತಾಯಿ ಹುಲಿ ಮತ್ತು ಅದರ ನಾಲ್ಕು ಮರಿಗಳು ಸೇರಿ ಐದು ಹುಲಿಗಳು ವಿಷ ಸೇವನೆಯಿಂದ ಸಾವಿಗೀಡಾದವು. ಈ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿ ಜನರ ಆಕ್ರೋಶಕ್ಕೂ ಕಾರಣವಾಗಿತ್ತು.
ಕಳೆದ ಮಂಗಳವಾರವೂ ಕಾವೇರಿ ವನ್ಯಜೀವಿಧಾಮದ ಹೊಳೆಮರದೊಟ್ಟಿಗಸ್ತಿನ ಕಿರಬನ ಕಲ್ಲು ಅರಣ್ಯ ಪ್ರದೇಶದಲ್ಲಿಯೂ ಎರಡು ಹುಲಿಮರಿಗಳ ಮೃತಪಟ್ಟಿವೆ. ಒಟ್ಟಾರೆ ಎರಡು ತಿಂಗಳ ಅವಧಿಯಲ್ಲಿ 7 ಹುಲಿ 2 ಚಿರತೆ ಮೃತಪಟ್ಟಿವೆ.
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…