ಚಾಮರಾಜನಗರ

ಹನೂರು | ಸಾಲು ಸಾಲು ವನ್ಯಜೀವಿ ಸಾವು : ಪ್ರಾಣಿಪ್ರಿಯರಲ್ಲಿ ಆತಂಕ

ಹನೂರು : ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ಶಾಖೆಯ ಹೊಳೆಮುರದಟ್ಟಿ ಗಸ್ತಿನ ಕಿರಬನಕಲ್ಲು ಅರಣ್ಯ ಪ್ರದೇಶದಲ್ಲಿ ಆಗಸ್ಟ್ 12 ರಂದು ಎರಡು ಹುಲಿ ಮರಿಗಳ ಸಾವು ಮಾಸುವ ಮುನ್ನವೇ ಚಿರತೆಯ ಕಳೇಬರ ಪತ್ತೆಯಾಗಿರುವುದು ವನ್ಯಜೀವಿ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ.

ಹನೂರು ವಲಯದ ಬಂಡಳ್ಳಿ ಶಾಖೆಯ ಮೇಕೆದಾಟು ಗಸ್ತಿನ ತಮ್ಮಡಿ ಬಾವಿ ಹಳ್ಳ ಕಾಡು ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗಸ್ತು ತಿರುಗುವಾಗ ಅಂದಾಜು 5 ವರ್ಷದ ಹೆಣ್ಣು ಚಿರತೆಯ ಕಳೆಬರ ಪತ್ತೆಯಾಗಿದೆ. ಮೃತ ಚಿರತೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದು, ಚಿರತೆಯ ಹಿಂಗಾಲುಗಳ ಪಾರ್ಶ್ವ ವಾಯುವಿನಿಂದ ಸ್ವಾಧೀನ ಕಳೆದುಕೊಂಡಿವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಅನಾರೋಗ್ಯವೆಂದು ಭಾವಿಸಿದರೂ ಚಿರತೆಯ ಸಾವಿನ ನಿಖರ ಕಾರಣ ತಿಳಿಯಲು ಪ್ರಮುಖ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮರಣೋತ್ತರ ಪರೀಕ್ಷೆಯ ಬಳಿಕ ಎನ್‌ಟಿಸಿಎ ಸದಸ್ಯರನ್ನೊಳಗೊಂಡ ತಂಡದ ಸಮ್ಮುಖದಲ್ಲಿ ಚಿರತೆಯ ಮೃತದೇಹವನ್ನು ನಿಯಮಾನುಸಾರ ಸುಡಲಾಯಿತು ಎಂದು ಕಾವೇರಿ ವನ್ಯಜೀವಿ ವಲಯದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏಳು ಹುಲಿಗಳ ಸಾವು: ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 2025ರ ಜೂನ್ 26ರಂದು ಒಂದು ತಾಯಿ ಹುಲಿ ಮತ್ತು ಅದರ ನಾಲ್ಕು ಮರಿಗಳು ಸೇರಿ ಐದು ಹುಲಿಗಳು ವಿಷ ಸೇವನೆಯಿಂದ ಸಾವಿಗೀಡಾದವು. ಈ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿ ಜನರ ಆಕ್ರೋಶಕ್ಕೂ ಕಾರಣವಾಗಿತ್ತು.

ಕಳೆದ ಮಂಗಳವಾರವೂ ಕಾವೇರಿ ವನ್ಯಜೀವಿಧಾಮದ ಹೊಳೆಮರದೊಟ್ಟಿಗಸ್ತಿನ ಕಿರಬನ ಕಲ್ಲು ಅರಣ್ಯ ಪ್ರದೇಶದಲ್ಲಿಯೂ ಎರಡು ಹುಲಿಮರಿಗಳ ಮೃತಪಟ್ಟಿವೆ. ಒಟ್ಟಾರೆ ಎರಡು ತಿಂಗಳ ಅವಧಿಯಲ್ಲಿ 7 ಹುಲಿ 2 ಚಿರತೆ ಮೃತಪಟ್ಟಿವೆ.

ಆಂದೋಲನ ಡೆಸ್ಕ್

Recent Posts

ಮುಸ್ಲಿಂ ನಂಬಿಕೆ; ಕಾಂಗ್ರೆಸ್‌ಗೆ ಬೇಕು ಹೊಣೆಗಾರಿಕೆ

ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…

7 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ

ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…

15 mins ago

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

3 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

3 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

3 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

4 hours ago