ಚಾಮರಾಜನಗರ

ಹನೂರು | ಸಾಲು ಸಾಲು ವನ್ಯಜೀವಿ ಸಾವು : ಪ್ರಾಣಿಪ್ರಿಯರಲ್ಲಿ ಆತಂಕ

ಹನೂರು : ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ಶಾಖೆಯ ಹೊಳೆಮುರದಟ್ಟಿ ಗಸ್ತಿನ ಕಿರಬನಕಲ್ಲು ಅರಣ್ಯ ಪ್ರದೇಶದಲ್ಲಿ ಆಗಸ್ಟ್ 12 ರಂದು ಎರಡು ಹುಲಿ ಮರಿಗಳ ಸಾವು ಮಾಸುವ ಮುನ್ನವೇ ಚಿರತೆಯ ಕಳೇಬರ ಪತ್ತೆಯಾಗಿರುವುದು ವನ್ಯಜೀವಿ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ.

ಹನೂರು ವಲಯದ ಬಂಡಳ್ಳಿ ಶಾಖೆಯ ಮೇಕೆದಾಟು ಗಸ್ತಿನ ತಮ್ಮಡಿ ಬಾವಿ ಹಳ್ಳ ಕಾಡು ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗಸ್ತು ತಿರುಗುವಾಗ ಅಂದಾಜು 5 ವರ್ಷದ ಹೆಣ್ಣು ಚಿರತೆಯ ಕಳೆಬರ ಪತ್ತೆಯಾಗಿದೆ. ಮೃತ ಚಿರತೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದು, ಚಿರತೆಯ ಹಿಂಗಾಲುಗಳ ಪಾರ್ಶ್ವ ವಾಯುವಿನಿಂದ ಸ್ವಾಧೀನ ಕಳೆದುಕೊಂಡಿವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಅನಾರೋಗ್ಯವೆಂದು ಭಾವಿಸಿದರೂ ಚಿರತೆಯ ಸಾವಿನ ನಿಖರ ಕಾರಣ ತಿಳಿಯಲು ಪ್ರಮುಖ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮರಣೋತ್ತರ ಪರೀಕ್ಷೆಯ ಬಳಿಕ ಎನ್‌ಟಿಸಿಎ ಸದಸ್ಯರನ್ನೊಳಗೊಂಡ ತಂಡದ ಸಮ್ಮುಖದಲ್ಲಿ ಚಿರತೆಯ ಮೃತದೇಹವನ್ನು ನಿಯಮಾನುಸಾರ ಸುಡಲಾಯಿತು ಎಂದು ಕಾವೇರಿ ವನ್ಯಜೀವಿ ವಲಯದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏಳು ಹುಲಿಗಳ ಸಾವು: ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 2025ರ ಜೂನ್ 26ರಂದು ಒಂದು ತಾಯಿ ಹುಲಿ ಮತ್ತು ಅದರ ನಾಲ್ಕು ಮರಿಗಳು ಸೇರಿ ಐದು ಹುಲಿಗಳು ವಿಷ ಸೇವನೆಯಿಂದ ಸಾವಿಗೀಡಾದವು. ಈ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿ ಜನರ ಆಕ್ರೋಶಕ್ಕೂ ಕಾರಣವಾಗಿತ್ತು.

ಕಳೆದ ಮಂಗಳವಾರವೂ ಕಾವೇರಿ ವನ್ಯಜೀವಿಧಾಮದ ಹೊಳೆಮರದೊಟ್ಟಿಗಸ್ತಿನ ಕಿರಬನ ಕಲ್ಲು ಅರಣ್ಯ ಪ್ರದೇಶದಲ್ಲಿಯೂ ಎರಡು ಹುಲಿಮರಿಗಳ ಮೃತಪಟ್ಟಿವೆ. ಒಟ್ಟಾರೆ ಎರಡು ತಿಂಗಳ ಅವಧಿಯಲ್ಲಿ 7 ಹುಲಿ 2 ಚಿರತೆ ಮೃತಪಟ್ಟಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago