ಚಾಮರಾಜನಗರ

ಹನೂರು | ಸಾಲು ಸಾಲು ವನ್ಯಜೀವಿ ಸಾವು : ಪ್ರಾಣಿಪ್ರಿಯರಲ್ಲಿ ಆತಂಕ

ಹನೂರು : ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ಶಾಖೆಯ ಹೊಳೆಮುರದಟ್ಟಿ ಗಸ್ತಿನ ಕಿರಬನಕಲ್ಲು ಅರಣ್ಯ ಪ್ರದೇಶದಲ್ಲಿ ಆಗಸ್ಟ್ 12 ರಂದು ಎರಡು ಹುಲಿ ಮರಿಗಳ ಸಾವು ಮಾಸುವ ಮುನ್ನವೇ ಚಿರತೆಯ ಕಳೇಬರ ಪತ್ತೆಯಾಗಿರುವುದು ವನ್ಯಜೀವಿ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ.

ಹನೂರು ವಲಯದ ಬಂಡಳ್ಳಿ ಶಾಖೆಯ ಮೇಕೆದಾಟು ಗಸ್ತಿನ ತಮ್ಮಡಿ ಬಾವಿ ಹಳ್ಳ ಕಾಡು ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗಸ್ತು ತಿರುಗುವಾಗ ಅಂದಾಜು 5 ವರ್ಷದ ಹೆಣ್ಣು ಚಿರತೆಯ ಕಳೆಬರ ಪತ್ತೆಯಾಗಿದೆ. ಮೃತ ಚಿರತೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದು, ಚಿರತೆಯ ಹಿಂಗಾಲುಗಳ ಪಾರ್ಶ್ವ ವಾಯುವಿನಿಂದ ಸ್ವಾಧೀನ ಕಳೆದುಕೊಂಡಿವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಅನಾರೋಗ್ಯವೆಂದು ಭಾವಿಸಿದರೂ ಚಿರತೆಯ ಸಾವಿನ ನಿಖರ ಕಾರಣ ತಿಳಿಯಲು ಪ್ರಮುಖ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮರಣೋತ್ತರ ಪರೀಕ್ಷೆಯ ಬಳಿಕ ಎನ್‌ಟಿಸಿಎ ಸದಸ್ಯರನ್ನೊಳಗೊಂಡ ತಂಡದ ಸಮ್ಮುಖದಲ್ಲಿ ಚಿರತೆಯ ಮೃತದೇಹವನ್ನು ನಿಯಮಾನುಸಾರ ಸುಡಲಾಯಿತು ಎಂದು ಕಾವೇರಿ ವನ್ಯಜೀವಿ ವಲಯದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏಳು ಹುಲಿಗಳ ಸಾವು: ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 2025ರ ಜೂನ್ 26ರಂದು ಒಂದು ತಾಯಿ ಹುಲಿ ಮತ್ತು ಅದರ ನಾಲ್ಕು ಮರಿಗಳು ಸೇರಿ ಐದು ಹುಲಿಗಳು ವಿಷ ಸೇವನೆಯಿಂದ ಸಾವಿಗೀಡಾದವು. ಈ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿ ಜನರ ಆಕ್ರೋಶಕ್ಕೂ ಕಾರಣವಾಗಿತ್ತು.

ಕಳೆದ ಮಂಗಳವಾರವೂ ಕಾವೇರಿ ವನ್ಯಜೀವಿಧಾಮದ ಹೊಳೆಮರದೊಟ್ಟಿಗಸ್ತಿನ ಕಿರಬನ ಕಲ್ಲು ಅರಣ್ಯ ಪ್ರದೇಶದಲ್ಲಿಯೂ ಎರಡು ಹುಲಿಮರಿಗಳ ಮೃತಪಟ್ಟಿವೆ. ಒಟ್ಟಾರೆ ಎರಡು ತಿಂಗಳ ಅವಧಿಯಲ್ಲಿ 7 ಹುಲಿ 2 ಚಿರತೆ ಮೃತಪಟ್ಟಿವೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago