ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಇಷ್ಟು ವಿಜೃಂಭಣೆಯಿಂದ ಆಚರಣೆ ಮಾಡಿರುವುದು ಅತ್ಯಂತ ಖುಷಿ ಕೊಟ್ಟಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 287ನೇ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ನಂತರ ಮಾತನಾಡಿದರು.
ಸಂತ ಸೇವಾಲಾಲ್ ಜಯಂತಿ ಮೂಲಕ ನೀವೆಲ್ಲರೂ ಸಹ ಸಂಘಟನೆಯಾಗುತ್ತಿದ್ದೂ ಇದರ ಮೂಲಕ ತಮ್ಮ ತಮ್ಮ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಪಡೆದುಕೊಳ್ಳಲು ಜಾಗೃತವಾಗಿರುವುದು ಸಂತಸದ ವಿಚಾರ. ಸಂಘಟನೆಯ ಮೂಲಕ ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗುವ ಮೂಲಕ ತಾವೆಲ್ಲರೂ ಸಹ ಒಳ್ಳೆಯ ಸಂದೇಶವನ್ನು ಸಮಾಜಕ್ಕೆ ಕೊಟ್ಟಿದ್ದೀರಾ. ಮುಂದಿನ ದಿನಗಳಲ್ಲಿ ನಿಮ್ಮ ತಾಂಡಾಗಳಿಗೆ ಬೇಕಾಗುವಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ನಾನು ಸದಾ ಮುಂದಿರುತ್ತೇನೆ. ಜೊತೆಗೆ ನೀವು ಕೊಟ್ಟಿರುವ ಮನವಿಯನ್ನು ಸಹ ಆದಷ್ಟು ಬೇಗ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸಂತ ಸೇವಾಲಾಲ್ ಜಯಂತಿಗೆ ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರು ಬಂದಿರುವುದರಿಂದ ತಾವು ದಯವಿಟ್ಟು ಎಷ್ಟೆ ಕಷ್ಟ ಬಂದರು ಸಹ ತಮ್ಮ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ. ನೀವು ಪಟ್ಟ ಕಷ್ಟ ಅವರು ಪಡಬಾರದು ಎಂಬ ಉದ್ದೇಶ ಇಟ್ಟುಕೊಂಡು ತಾವು ಏನು ಗುರಿ ಕಟ್ಟುಕೊಂಡಿದ್ದೀರಾ. ಅದಕ್ಕೆ ತಕ್ಕಂತೆ ಉನ್ನತ ಶಿಕ್ಷಣ ಹಾಗೂ ಇನ್ನಿತರ ಸೌಲಭ್ಯ ಕಲ್ಪಿಸಲು ನಾನು ಸಹ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಈಗಾಗಲೇ ನಾನು ಕುಡಿಯುವ ನೀರಿನ ವಿಷಯಕ್ಕೆ ಸಂಬಂಧ ಪಟ್ಟಂತೆ ಸಾಕಷ್ಟು ಅನುದಾನ ಬೇಕಿದೆ. ಸುಮಾರು 491 ಕೋಟಿ ಅನುದಾನ ಬೇಕಿದೆ ಒಂದು ವೇಳೆ ಅಷ್ಟು ಅನುದಾನ ಬಜೆಟ್ ನಲ್ಲಿ ಬಿಡುಗಡೆಯಾದರೆ ನಮ್ಮ ಭಾಗಕ್ಕೆ ಹೆಚ್ಚಿನ ನೀರಾವರಿ ಸೌಲಭ್ಯ ಸಿಗಲಿದೆ ಎಂದು ತಿಳಿಸಿದರು.
ಕೆಪಿಸಿಸಿ ಕಾನೂನು ವಿಭಾಗದ ಅನಂತ ನಾಯ್ಕ್ ಮಾತನಾಡಿ, ಬಂಜಾರ ಸಮುದಾಯಕ್ಕೆ ಸೇವಾಲಾಲ್ ಒಂದು ಕಣ್ಣಾದರೆ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇನ್ನೊಂದು ಕಣ್ಣು. ಬಾಬಾ ಸಾಹೇಬರು ಕೊಟ್ಟಿರುವ ಸಂವಿಧಾನ ಇರುವವರೆಗೂ ಸಹ ನಮ್ಮನ್ನ ಎಸ್ ಸಿ ಪಟ್ಟಿಯಿಂದ ಕೈ ಬಿಡಲು ಯಾರಿಂದಲೂ ಸಾಧ್ಯವಿಲ್ಲ. ನಮಗೆ ಮೊದಲು ನಾಲ್ವಡಿ ಕೃಷ್ಣ ರಾಜ ಒಡೆಯರ್ ರವರು ಕೊಟ್ಟಿರುವ ಮೀಸಲಾತಿಯನ್ನು ಕಾಣದ ಕೈಗಳು ಕಿತ್ತು ಕೊಳ್ಳಲು ಮುಂದಾಗಿದ್ದು, ಅದನ್ನು ಅರಿತ ಸಿದ್ದರಾಮಯ್ಯ ಸರ್ಕಾರ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ಈ ಹಿಂದೆ ಇದ್ದಂತೆ ಮೀಸಲಾತಿ ಮುಂದುವರಿಯಲಿದೆ ಎಂದು ತಿಳಿಸಿದ್ದು, ಅವರಿಗೆ ನಮ್ಮ ಬಂಜಾರ ಸಮುದಾಯದ ವತಿಯಿಂದ ಧನ್ಯವಾದಗಳು ಅರ್ಪಿಸುತ್ತೇವೆ. ಜೊತೆಗೆ ನಮ್ಮ ಭಾಷೆ ಇಡೀ ಜಗತ್ತಿನಲ್ಲಿ ಎಲ್ಲರೂ ಒಂದೇ ಭಾಷೆ ಮಾತಾಡುತ್ತಾರೆ. ನಮ್ಮ ಆಚಾರ, ವಿಚಾರ, ಸಂಸ್ಕೃತಿ ತುಂಬಾ ಮೆಚ್ಚುವಂತದ್ದಾಗಿದೆ. ಆದರೆ ನಮ್ಮ ಭಾಷೆಗೆ ಸಂವಿಧಾನದಲ್ಲಿ ಮಾನ್ಯತೆ ಸಿಕ್ಕಿಲ್ಲ ಮುಂದಿನ ದಿನಗಳಲ್ಲಿ ಮಾನ್ಯತೆ ಸಿಗುವಲ್ಲಿ ನಮ್ಮ ಶಾಸಕರು ಸದನದಲ್ಲಿ ದ್ವನಿ ಎತ್ತಬೇಕಿದೆ ಎಂದರು.
ಬಂಜಾರ ಸಂಘದ ಗೌರವಾಧ್ಯಕ್ಷ ಶಾಂತರಾಜು ಮಾತನಾಡಿ, ಲಂಬಾಣಿ ಸಮುದಾಯಕ್ಕೆ 5 ಸಾವಿರ ವರ್ಷಗಳ ಇತಿಹಾಸವಿದೆ. ಒಳ ಮೀಸಲಾತಿಯಲ್ಲಿ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಶಾಸಕರು ಬಜೆಟ್ ಅಧಿವೇಶನದಲ್ಲಿ ನಮ್ಮ ಸಮುದಾಯದ ಪರ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು.
ಹನೂರು ತಾಲೂಕು ವ್ಯಾಪ್ತಿಯಲ್ಲಿ 29 ತಾಂಡಗಳಿದ್ದು, ತಾಲೂಕು ಕೇಂದ್ರದಲ್ಲಿ ಸಮುದಾಯ ಭವನ ಇಲ್ಲದೆ ಇರುವುದರಿಂದ ಸಮಾಜದವರು ಸಭೆ ಸಮಾರಂಭಗಳನ್ನು ಮಾಡಲು ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಎರಡು ಎಕರೆ ಸರ್ಕಾರಿ ನಿವೇಶನವನ್ನು ಕೊಡಿಸಬೇಕು. ಹಲವಾರು ವರ್ಷಗಳಿಂದ ತಾಂಡಾ ಗ್ರಾಮಗಳು ಕಂದಾಯ ಗ್ರಾಮವಾಗದಿರುವುದರಿಂದ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಅತಿ ಶೀಘ್ರದಲ್ಲಿ ನಮ್ಮ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ನಮ್ಮ ಸಮುದಾಯಕ್ಕೆ ಪ್ರತ್ಯೇಕವಾಗಿ ಸ್ಮಶಾನದ ವ್ಯವಸ್ಥೆ ಇಲ್ಲದೆ ಇರುವುದರಿಂದ ತೊಂದರೆ ಆಗುತ್ತದೆ. ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳದೆ ಅತಿ ಶೀಘ್ರದಲ್ಲಿಯೇ ಸ್ಮಶಾನಕ್ಕೆ ನಿವೇಶನ ಗುರುತಿಸಿ ಕೊಡಬೇಕು ಎಂದರು.
ವೇದಿಕೆ ಕಾರ್ಯಕ್ರಮಕ್ಕೆ ಮುನ್ನಾ ಪಟ್ಟಣದ ಆರ್ಎಂಸಿ ಮೈದಾನದಿಂದ ಹೊರಟ ವಿವಿಧ ಕಲಾ ತಂಡಗಳು ಕಲಾ ಪ್ರದರ್ಶನ ಮಾಡುವ ಮೂಲಕ ಮುಖ್ಯ ರಸ್ತೆಯ ಮೂಲಕ ಹೊರಟು ನಾಡಪ್ರಭು ಕೆಂಪೇಗೌಡ ವೃತ್ತದ ಮೂಲಕ ಮಲೆಮಹದೇಶ್ವರ ಕ್ರೀಡಾಂಗಣಕ್ಕೆ ಆಗಮಿಸಿತು. ವಾದ್ಯ ಮೇಳದ ತಾಳಕ್ಕೆ ಬಂಜಾರ ಸಮುದಾಯದ ಯುವಕರು, ಮಹಿಳೆಯರು ಮಕ್ಕಳು ಕುಣಿದು ಕುಪ್ಪಳಿಸಿದರು.
ಜಗದ್ಗುರು ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಪರಮ ಪೂಜ್ಯ ಸೇವಾಲಾಲ್ ಸೈನಾ ಭಗತ್, ಮಾಜಿ ಶಾಸಕರುಗಳಾದ ಆರ್ ನರೇಂದ್ರ, ಜಿ ಎನ್ ನಂಜುಂಡಸ್ವಾಮಿ, ಸೇವಾಲಾಲ್ ಸಂಘದ ಗೌರವ ಅಧ್ಯಕ್ಷ ಶಾಂತರಾಜು, ಡಾ.ದತ್ತೇಶ್ ಕುಮಾರ್,ಸಮಾಜ ಸೇವಕ ನಿಶಾಂತ್, ಡಾ ವಿಜಯ್ ಜಾಧವ್, ಚಾಮುಲ್ ಅಧ್ಯಕ್ಷ ನಂಜುಂಡ ಸ್ವಾಮಿ, ನಿರ್ದೇಶಕರಾದ ಮಹದೇವ ಪ್ರಸಾದ್, ಶಾಹುಲ್ ಅಹಮದ್,ಅನಂತ್ ನಾಯ್ಕ್, ಮಹಿಳಾ ರಾಜ್ಯ ಅಧ್ಯಕ್ಷೆ ಶೈಲ ಬಾಯಿ, ಕರ್ನಾಟಕ ಪ್ರದೇಶ ರಾಜ್ಯ ಅಧ್ಯಕ್ಷ ಸಿದ್ಯಾ ನಾಯ್ಕ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…