ಚಾಮರಾಜನಗರ

ಶಾಮನೂರು ಶಿವಶಂಕರಪ್ಪ ಹಿರಿಯ ಮುತ್ಸದಿಯಲ್ಲ, ಜಾತಿವಾದಿ: ಎಚ್‌. ವಿಶ್ವನಾಥ್‌

ಚಾಮರಾಜನಗರ: ಹಿರಿಯ ಕಾಂಗ್ರೆಸ್‌ ನಾಯಕರಾದ ಶಾಮನೂರು ಶಿವಶಂಕರಪ್ಪ ಹಿರಿಯ ಮುತ್ಸದಿಯಲ್ಲ, ಅವರೊಬ್ಬ ಜಾತಿವಾದಿ. ಕಾಂಗ್ರೆಸ್‌ ಜೀವಂತವಾಗಿದ್ದರೆ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು ಎಂದು ಹಳ್ಳಿಹಕ್ಕಿ ಎಚ್‌. ವಿಶ್ವನಾಥ್‌ ಕಿಡಿಕಾರಿದ್ದಾರೆ.

ಶಾಮನೂರು ಶಿವಶಂಕರಪ್ಪನವರು, ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ, ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಮತ್ತೊಮ್ಮೆ ಸಂಸದರಾಗಬೇಕು ಎಂದಿದ್ದರು. ಇದಕ್ಕೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಇನ್ನೂ ಬಿಜೆಪಿ ನಾಯಕರು ರಾಘವೇಂದ್ರ ಅವರ ಕೆಲಸವನ್ನು ಶಾಮನೂರು ಗುರುತಿಸಿ ಹೇಳಿಕೆ ನೀಡಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದರು.

ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಎಂಎಲ್‌ಸಿ ಎಚ್‌. ವಿಶ್ವನಾಥ್‌ ಅವರು, ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು ಶಾಸಕರಾಗಿ, ಮಗ ಮಂತ್ರಿಯಾಗಿ, ನೀನು ಕಾಂಗ್ರೆಸ್‍ನಲ್ಲಿದ್ದುಕೊಂಡು ಅಧಿಕಾರ ಅನುಭವಿಸಿ ಬೇರೆ ಪಾರ್ಟಿಗೆ ಕ್ಯಾನ್ವಾಸ್ ಮಾಡ್ತಿಯಲ್ಲ ಏನ್ ಹೇಳ್ಬೇಕು ನಿನಗೆ. ನೀನು ದೇಶವಾದಿನೋ? ಇಲ್ಲ, ಜಾತಿವಾದಿನೊ? ಅವರನ್ನ ಪಕ್ಷದಿಂದ ಈ ಕೂಡಲೇ ಹೊರಹಾಕಬೇಕು. ಅವರೆಲ್ಲ ನೆಂಟರು, ಅವರಿಗೆ ಪಾರ್ಟಿ ಸೋತ್ರು ನೆಂಟಸ್ತಿಕೆ ಸೋಲಬಾರದು ಎಂದು ಶಿವಶಂಕರಪ್ಪ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ನಿಗಮ ಮಂಡಳಿ ವಿಚಾರದಲ್ಲಿ ಶಾಸಕರ ಅಸಮಾಧಾನ ವಿಚಾರವಾಗಿ, ಎಂಎಲ್‍ಎಗಳಿಗೆ ಬೋಡ್ರ್ಸ್ & ಕಾರ್ಪೋರೇಷನ್‌ ಕೊಡ್ಬೇಡಿ ಎಂದು ವೀರೇಂದ್ರ ಪಾಟೀಲ್‍ರ ಕಾಲದಲ್ಲೇ ಹೇಳಿದ್ದೆ ಎಂದು ಪ್ರತಿಕ್ರಿಯೆ ನೀಡಿದರು.

andolanait

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

1 hour ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

1 hour ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

1 hour ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

1 hour ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

1 hour ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

1 hour ago