ಚಾಮರಾಜನಗರ

ಶಾಮನೂರು ಶಿವಶಂಕರಪ್ಪ ಹಿರಿಯ ಮುತ್ಸದಿಯಲ್ಲ, ಜಾತಿವಾದಿ: ಎಚ್‌. ವಿಶ್ವನಾಥ್‌

ಚಾಮರಾಜನಗರ: ಹಿರಿಯ ಕಾಂಗ್ರೆಸ್‌ ನಾಯಕರಾದ ಶಾಮನೂರು ಶಿವಶಂಕರಪ್ಪ ಹಿರಿಯ ಮುತ್ಸದಿಯಲ್ಲ, ಅವರೊಬ್ಬ ಜಾತಿವಾದಿ. ಕಾಂಗ್ರೆಸ್‌ ಜೀವಂತವಾಗಿದ್ದರೆ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು ಎಂದು ಹಳ್ಳಿಹಕ್ಕಿ ಎಚ್‌. ವಿಶ್ವನಾಥ್‌ ಕಿಡಿಕಾರಿದ್ದಾರೆ.

ಶಾಮನೂರು ಶಿವಶಂಕರಪ್ಪನವರು, ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ, ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಮತ್ತೊಮ್ಮೆ ಸಂಸದರಾಗಬೇಕು ಎಂದಿದ್ದರು. ಇದಕ್ಕೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಇನ್ನೂ ಬಿಜೆಪಿ ನಾಯಕರು ರಾಘವೇಂದ್ರ ಅವರ ಕೆಲಸವನ್ನು ಶಾಮನೂರು ಗುರುತಿಸಿ ಹೇಳಿಕೆ ನೀಡಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದರು.

ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಎಂಎಲ್‌ಸಿ ಎಚ್‌. ವಿಶ್ವನಾಥ್‌ ಅವರು, ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು ಶಾಸಕರಾಗಿ, ಮಗ ಮಂತ್ರಿಯಾಗಿ, ನೀನು ಕಾಂಗ್ರೆಸ್‍ನಲ್ಲಿದ್ದುಕೊಂಡು ಅಧಿಕಾರ ಅನುಭವಿಸಿ ಬೇರೆ ಪಾರ್ಟಿಗೆ ಕ್ಯಾನ್ವಾಸ್ ಮಾಡ್ತಿಯಲ್ಲ ಏನ್ ಹೇಳ್ಬೇಕು ನಿನಗೆ. ನೀನು ದೇಶವಾದಿನೋ? ಇಲ್ಲ, ಜಾತಿವಾದಿನೊ? ಅವರನ್ನ ಪಕ್ಷದಿಂದ ಈ ಕೂಡಲೇ ಹೊರಹಾಕಬೇಕು. ಅವರೆಲ್ಲ ನೆಂಟರು, ಅವರಿಗೆ ಪಾರ್ಟಿ ಸೋತ್ರು ನೆಂಟಸ್ತಿಕೆ ಸೋಲಬಾರದು ಎಂದು ಶಿವಶಂಕರಪ್ಪ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ನಿಗಮ ಮಂಡಳಿ ವಿಚಾರದಲ್ಲಿ ಶಾಸಕರ ಅಸಮಾಧಾನ ವಿಚಾರವಾಗಿ, ಎಂಎಲ್‍ಎಗಳಿಗೆ ಬೋಡ್ರ್ಸ್ & ಕಾರ್ಪೋರೇಷನ್‌ ಕೊಡ್ಬೇಡಿ ಎಂದು ವೀರೇಂದ್ರ ಪಾಟೀಲ್‍ರ ಕಾಲದಲ್ಲೇ ಹೇಳಿದ್ದೆ ಎಂದು ಪ್ರತಿಕ್ರಿಯೆ ನೀಡಿದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago