ಚಾಮರಾಜನಗರ: ಹಿರಿಯ ಕಾಂಗ್ರೆಸ್ ನಾಯಕರಾದ ಶಾಮನೂರು ಶಿವಶಂಕರಪ್ಪ ಹಿರಿಯ ಮುತ್ಸದಿಯಲ್ಲ, ಅವರೊಬ್ಬ ಜಾತಿವಾದಿ. ಕಾಂಗ್ರೆಸ್ ಜೀವಂತವಾಗಿದ್ದರೆ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು ಎಂದು ಹಳ್ಳಿಹಕ್ಕಿ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಶಾಮನೂರು ಶಿವಶಂಕರಪ್ಪನವರು, ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ, ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಮತ್ತೊಮ್ಮೆ ಸಂಸದರಾಗಬೇಕು ಎಂದಿದ್ದರು. ಇದಕ್ಕೆ ಕಾಂಗ್ರೆಸ್ನಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಇನ್ನೂ ಬಿಜೆಪಿ ನಾಯಕರು ರಾಘವೇಂದ್ರ ಅವರ ಕೆಲಸವನ್ನು ಶಾಮನೂರು ಗುರುತಿಸಿ ಹೇಳಿಕೆ ನೀಡಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದರು.
ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಎಂಎಲ್ಸಿ ಎಚ್. ವಿಶ್ವನಾಥ್ ಅವರು, ಕಾಂಗ್ರೆಸ್ನಿಂದ ಟಿಕೆಟ್ ಪಡೆದು ಶಾಸಕರಾಗಿ, ಮಗ ಮಂತ್ರಿಯಾಗಿ, ನೀನು ಕಾಂಗ್ರೆಸ್ನಲ್ಲಿದ್ದುಕೊಂಡು ಅಧಿಕಾರ ಅನುಭವಿಸಿ ಬೇರೆ ಪಾರ್ಟಿಗೆ ಕ್ಯಾನ್ವಾಸ್ ಮಾಡ್ತಿಯಲ್ಲ ಏನ್ ಹೇಳ್ಬೇಕು ನಿನಗೆ. ನೀನು ದೇಶವಾದಿನೋ? ಇಲ್ಲ, ಜಾತಿವಾದಿನೊ? ಅವರನ್ನ ಪಕ್ಷದಿಂದ ಈ ಕೂಡಲೇ ಹೊರಹಾಕಬೇಕು. ಅವರೆಲ್ಲ ನೆಂಟರು, ಅವರಿಗೆ ಪಾರ್ಟಿ ಸೋತ್ರು ನೆಂಟಸ್ತಿಕೆ ಸೋಲಬಾರದು ಎಂದು ಶಿವಶಂಕರಪ್ಪ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ನಿಗಮ ಮಂಡಳಿ ವಿಚಾರದಲ್ಲಿ ಶಾಸಕರ ಅಸಮಾಧಾನ ವಿಚಾರವಾಗಿ, ಎಂಎಲ್ಎಗಳಿಗೆ ಬೋಡ್ರ್ಸ್ & ಕಾರ್ಪೋರೇಷನ್ ಕೊಡ್ಬೇಡಿ ಎಂದು ವೀರೇಂದ್ರ ಪಾಟೀಲ್ರ ಕಾಲದಲ್ಲೇ ಹೇಳಿದ್ದೆ ಎಂದು ಪ್ರತಿಕ್ರಿಯೆ ನೀಡಿದರು.
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…
ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…
ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…