ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮಹಾರಥೋತ್ಸವದೊಂದಿಗೆ ಭಕ್ತರು ಹಾಗೂ ಸರ್ಕಾರ, ಜಿಲ್ಲಾಡಳಿತದ ಸಹಕಾರದೊಂದಿಗೆ ಅದ್ದೂರಿಯಾಗಿ ಯಶಸ್ವಿಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ತಿಳಿಸಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ ಯಶಸ್ವಿಯಾಗಿ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಸುಮಾರು 8 ರಿಂದ 9 ಲಕ್ಷಕ್ಕೆ ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡು ಪ್ರಸಾದ ಸ್ವೀಕರಿಸಿದ್ದಾರೆ.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಯಶಸ್ವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್, ಶಾಸಕ ಎಂ.ಆರ್.ಮಂಜುನಾಥ್, ಜಿಲ್ಲಾಡಳಿತ ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನಸ್ವಾಮಿ, ಬೇಡಗಂಪಣ ಅರ್ಚಕ ವೃಂದದವರ ಮಾರ್ಗದರ್ಶನದಲ್ಲಿ ಜಾತ್ರಾ ಮಹೋತ್ಸವ ಯಶಸ್ವಿಯಾಗಿದೆ ಎಂದರು.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಾಧಿಕಾರದ ಪ್ರತಿಯೊಬ್ಬ ನೌಕರರು ಹಗಲಿರುಳು ಶ್ರಮಿಸಿ ಯಶಸ್ವಿಗೆ ಕಾರಣಿಭೂತರಾಗಿದ್ದಾರೆ. ಅವರಿಗೆ ವಿಶೇಷವಾಗಿ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
ಈ ಬಾರಿ ಸುಮಾರು ಎಂಟು ಲಕ್ಷಕ್ಕೂ ಹೆಚ್ಚು ಮಾದಪ್ಪ ಭಕ್ತರು ವಿಶೇಷ ದಾಸೋಹ ಹಾಗೂ ದಾಸೋಹ ಭವನದಲ್ಲಿ ಪ್ರಸಾದ ಸ್ವೀಕರಿಸಿದ್ದಾರೆ. ಮಹದೇಶ್ವರಸ್ವಾಮಿ ಎಲ್ಲರಿಗೂ ಒಳಿತು ಮಾಡಲಿ ಎಂದು ಶುಭ ಕೋರಿದರು.
ಈ ವೇಳೆ ಲೆಕ್ಕಾಧೀಕ್ಷಕರಾದ ಗುರುಮಲ್ಲಯ್ಯ, ದ್ವಿತೀಯ ದರ್ಜೆ ಸಹಾಯಕರುಗಳಾದ ಸರಗೂರು ಮಹದೇವಸ್ವಾಮಿ, ನಾಗರಾಜು, ಜನಾರ್ಧನ್, ಪಾರುಪತ್ತೆದಾರ ಮಹಾಲಿಂಗನ ಕಟ್ಟೆ ಮಹದೇವಸ್ವಾಮಿ, ರಾಜಶೇಖರ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…