ಚಾಮರಾಜನಗರ

ಶಿವರಾತ್ರಿ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಗ್ರಹವಾಗಿದ್ದು ಬರೋಬ್ಬರಿ 3 ಕೋಟಿ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯಿಂದ ಮಾರ್ಚ್ 6 ರಿಂದ 11 ರವರೆಗೆ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಬರೋಬ್ಬರಿ 3.24 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ವಿಶೇಷವೆಂದರೆ ಈ ಹಣ ಹುಂಡಿ ಕಾಣಿಕೆ ಮತ್ತು ವಸತಿ ವ್ಯವಸ್ಥೆಯ ಶುಲ್ಕದಿಂದ ಗಳಿಸಿದ ಹಣವನ್ನು ಹೊರತುಪಡಿಸಿದ ಆದಾಯವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ದೇಗುಲದ ಆಡಳಿತ ಮಂಡಳಿಯು ಎಲ್ಲಾ ರೀತಿಯ ಉತ್ಸವಗಳು, ಸೇವೆಗಳು, ಲಡ್ಡು ಪ್ರಸಾದ ಮಾರಾಟ ಮತ್ತು ಇತರ ಪ್ರಸಾದ, ವಿಶೇಷ ದರ್ಶನ ಟಿಕೆಟ್‌ಗಳು, ಬ್ಯಾಗ್‌ಗಳು, ಸ್ಟಾಲ್ ಒಪ್ಪಂದಗಳು ಮತ್ತು ಇತರ ಎಲ್ಲಾ ಆದಾಯದ ಮೂಲಗಳನ್ನು ಗಣನೆಗೆ ತೆಗೆದುಕೊಂಡಿದೆ.

ಆರು ದಿನಗಳಲ್ಲಿ ಲಡ್ಡು ಮಾರಾಟದ ಮೂಲಕ 1.13 ಕೋಟಿ ರೂ., ಚಿನ್ನದ ರಥದ ಸೇವೆಯಿಂದ 90.25 ಲಕ್ಷ ರೂ., ವಿಶೇಷ ದರ್ಶನ ಟಿಕೆಟ್‌ನಿಂದ 67.70 ಲಕ್ಷ ರೂ., ಪ್ರಸಾದ ಮಾರಾಟದಿಂದ 11.93 ಲಕ್ಷ ರೂ., ಸ್ಟಾಲ್ ಒಪ್ಪಂದದ ಮೂಲಕ 10.52 ಲಕ್ಷ ರೂ. ಆದಾಯ ಬಂದಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಆರು ದಿನಗಳ ಪೈಕಿ ಮಾರ್ಚ್ 6 ರಂದು 40.17 ಲಕ್ಷ ರೂ., ಮಾರ್ಚ್ 7 ರಂದು 30.21 ಲಕ್ಷ ರೂ., ಮಾರ್ಚ್ 8 ರಂದು 70.85 ಲಕ್ಷ ರೂ., ಮಾರ್ಚ್ 9 ರಂದು 62.78 ಲಕ್ಷ ರೂ., ಮಾರ್ಚ್ 10 ರಂದು 87.92 ಲಕ್ಷ ರೂ. ಮತ್ತು ಮಾರ್ಚ್ 11 ರಂದು 32.21 ಲಕ್ಷ ರೂ. ಆದಾಯ ಸಂಗ್ರವಾಗಿದೆ ಎಂದು ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

andolanait

Recent Posts

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ : ಸಿಎಂ ಆರೋಪ

ಮೈಸೂರು : ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು…

5 mins ago

ಪಿಎಂ-ಸಿಎಂ ಗುಟ್ಟು ರಟ್ಟು ; ಸಂಭಾಷಣೆ ರಹಸ್ಯ ಬಿಚ್ಚಿಟ್ಟ ಸಿಎಂ

ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ…

22 mins ago

ಇನ್ನು ಮುಂದೆ ಸೌಜನ್ಯದಿಂದ ವರ್ತಿಸುವುದಿಲ್ಲ ; ಇರಾನ್‌ಗೆ ಟ್ರಂಪ್‌ನ ಕಠಿಣ ಎಚ್ಚರಿಕೆ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು…

46 mins ago

ಬಿಟ್‌ಕಾಯಿಲ್‌ ಪ್ರಕರಣ; ನಲಪಾಡ್‌ ಹ್ಯಾರಿಸ್‌ ಮನೆ ಸೇರಿ 17 ಕಡೆ ಇ.ಡಿ ದಾಳಿ

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ…

57 mins ago

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

2 hours ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

2 hours ago