ಚಾಮರಾಜನಗರ

ಶಿವರಾತ್ರಿ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಗ್ರಹವಾಗಿದ್ದು ಬರೋಬ್ಬರಿ 3 ಕೋಟಿ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯಿಂದ ಮಾರ್ಚ್ 6 ರಿಂದ 11 ರವರೆಗೆ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಬರೋಬ್ಬರಿ 3.24 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ವಿಶೇಷವೆಂದರೆ ಈ ಹಣ ಹುಂಡಿ ಕಾಣಿಕೆ ಮತ್ತು ವಸತಿ ವ್ಯವಸ್ಥೆಯ ಶುಲ್ಕದಿಂದ ಗಳಿಸಿದ ಹಣವನ್ನು ಹೊರತುಪಡಿಸಿದ ಆದಾಯವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ದೇಗುಲದ ಆಡಳಿತ ಮಂಡಳಿಯು ಎಲ್ಲಾ ರೀತಿಯ ಉತ್ಸವಗಳು, ಸೇವೆಗಳು, ಲಡ್ಡು ಪ್ರಸಾದ ಮಾರಾಟ ಮತ್ತು ಇತರ ಪ್ರಸಾದ, ವಿಶೇಷ ದರ್ಶನ ಟಿಕೆಟ್‌ಗಳು, ಬ್ಯಾಗ್‌ಗಳು, ಸ್ಟಾಲ್ ಒಪ್ಪಂದಗಳು ಮತ್ತು ಇತರ ಎಲ್ಲಾ ಆದಾಯದ ಮೂಲಗಳನ್ನು ಗಣನೆಗೆ ತೆಗೆದುಕೊಂಡಿದೆ.

ಆರು ದಿನಗಳಲ್ಲಿ ಲಡ್ಡು ಮಾರಾಟದ ಮೂಲಕ 1.13 ಕೋಟಿ ರೂ., ಚಿನ್ನದ ರಥದ ಸೇವೆಯಿಂದ 90.25 ಲಕ್ಷ ರೂ., ವಿಶೇಷ ದರ್ಶನ ಟಿಕೆಟ್‌ನಿಂದ 67.70 ಲಕ್ಷ ರೂ., ಪ್ರಸಾದ ಮಾರಾಟದಿಂದ 11.93 ಲಕ್ಷ ರೂ., ಸ್ಟಾಲ್ ಒಪ್ಪಂದದ ಮೂಲಕ 10.52 ಲಕ್ಷ ರೂ. ಆದಾಯ ಬಂದಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಆರು ದಿನಗಳ ಪೈಕಿ ಮಾರ್ಚ್ 6 ರಂದು 40.17 ಲಕ್ಷ ರೂ., ಮಾರ್ಚ್ 7 ರಂದು 30.21 ಲಕ್ಷ ರೂ., ಮಾರ್ಚ್ 8 ರಂದು 70.85 ಲಕ್ಷ ರೂ., ಮಾರ್ಚ್ 9 ರಂದು 62.78 ಲಕ್ಷ ರೂ., ಮಾರ್ಚ್ 10 ರಂದು 87.92 ಲಕ್ಷ ರೂ. ಮತ್ತು ಮಾರ್ಚ್ 11 ರಂದು 32.21 ಲಕ್ಷ ರೂ. ಆದಾಯ ಸಂಗ್ರವಾಗಿದೆ ಎಂದು ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago