ಚಾಮರಾಜನಗರ

ಶಿವರಾತ್ರಿ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಗ್ರಹವಾಗಿದ್ದು ಬರೋಬ್ಬರಿ 3 ಕೋಟಿ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯಿಂದ ಮಾರ್ಚ್ 6 ರಿಂದ 11 ರವರೆಗೆ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಬರೋಬ್ಬರಿ 3.24 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ವಿಶೇಷವೆಂದರೆ ಈ ಹಣ ಹುಂಡಿ ಕಾಣಿಕೆ ಮತ್ತು ವಸತಿ ವ್ಯವಸ್ಥೆಯ ಶುಲ್ಕದಿಂದ ಗಳಿಸಿದ ಹಣವನ್ನು ಹೊರತುಪಡಿಸಿದ ಆದಾಯವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ದೇಗುಲದ ಆಡಳಿತ ಮಂಡಳಿಯು ಎಲ್ಲಾ ರೀತಿಯ ಉತ್ಸವಗಳು, ಸೇವೆಗಳು, ಲಡ್ಡು ಪ್ರಸಾದ ಮಾರಾಟ ಮತ್ತು ಇತರ ಪ್ರಸಾದ, ವಿಶೇಷ ದರ್ಶನ ಟಿಕೆಟ್‌ಗಳು, ಬ್ಯಾಗ್‌ಗಳು, ಸ್ಟಾಲ್ ಒಪ್ಪಂದಗಳು ಮತ್ತು ಇತರ ಎಲ್ಲಾ ಆದಾಯದ ಮೂಲಗಳನ್ನು ಗಣನೆಗೆ ತೆಗೆದುಕೊಂಡಿದೆ.

ಆರು ದಿನಗಳಲ್ಲಿ ಲಡ್ಡು ಮಾರಾಟದ ಮೂಲಕ 1.13 ಕೋಟಿ ರೂ., ಚಿನ್ನದ ರಥದ ಸೇವೆಯಿಂದ 90.25 ಲಕ್ಷ ರೂ., ವಿಶೇಷ ದರ್ಶನ ಟಿಕೆಟ್‌ನಿಂದ 67.70 ಲಕ್ಷ ರೂ., ಪ್ರಸಾದ ಮಾರಾಟದಿಂದ 11.93 ಲಕ್ಷ ರೂ., ಸ್ಟಾಲ್ ಒಪ್ಪಂದದ ಮೂಲಕ 10.52 ಲಕ್ಷ ರೂ. ಆದಾಯ ಬಂದಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಆರು ದಿನಗಳ ಪೈಕಿ ಮಾರ್ಚ್ 6 ರಂದು 40.17 ಲಕ್ಷ ರೂ., ಮಾರ್ಚ್ 7 ರಂದು 30.21 ಲಕ್ಷ ರೂ., ಮಾರ್ಚ್ 8 ರಂದು 70.85 ಲಕ್ಷ ರೂ., ಮಾರ್ಚ್ 9 ರಂದು 62.78 ಲಕ್ಷ ರೂ., ಮಾರ್ಚ್ 10 ರಂದು 87.92 ಲಕ್ಷ ರೂ. ಮತ್ತು ಮಾರ್ಚ್ 11 ರಂದು 32.21 ಲಕ್ಷ ರೂ. ಆದಾಯ ಸಂಗ್ರವಾಗಿದೆ ಎಂದು ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago