ಚಾಮರಾಜನಗರ

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ ಮೇಲೆ ಅರಣ್ಯ ಇಲಾಖೆಯವರು ಗುಂಡಿನ ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎಂಬ ಮೃತರ ಕುಟುಂಬಸ್ಥರ ಆರೋಪಗಳಿಗೆ ಇಲಾಖೆ ಮತ್ತೆ ಕೌಂಟರ್​​ ನೀಡಿದ್ದು, ಮೃತ ಮೂವರು ಸೇರಿ ನಾಲ್ವರೂ ಬೇಟೆಗೆ ಹೋಗಿದ್ದರು ಎಂಬುದಕ್ಕೆ ಸಾಕ್ಷಿ ಬಿಡುಗಡೆ ಮಾಡಿದೆ.

ಸ್ಥಳದಲ್ಲಿ ಸಿಕ್ಕ ಬ್ಯಾಗ್​, ಮಾಂಸ, ಅಡುಗೆ ಸಾಮಗ್ರಿ ಚಿತ್ರ ರಿಲೀಸ್​​ ಮಾಡಲಾಗಿದ್ದು, ವನ್ಯಮೃಗದ ಮಾಂಸದಲ್ಲಿ ಗುಂಡಿನ ಗುರುತು ಪತ್ತೆಯಾಗಿರೋದು ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರಕರಣ ಸಂಬಂಧ ಅರಣ್ಯ ಅಧಿಕಾರಿಗಳು ಈ ಹಿಂದೆಯೂ ಕೆಲಸ ಸಾಕ್ಷ್ಯಗಳನ್ನು ಬಹಿರಂಗಪಡಿಸಿದ್ದರು. ಆತ್ಮರಕ್ಷಣೆಗಾಗಿ ತಮ್ಮ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದ ಇಲಾಖೆ, ಘಟನಾ ಸ್ಥಳದಲ್ಲಿ ಸಿಕ್ಕಿದ್ದ 34 ಕೆ.ಜಿ ಜಿಂಕೆ ಮಾಂಸ ಹಾಗೂ ಬಂದೂಕುಗಳು ಮತ್ತು ಚಪ್ಪಲಿಯ ಫೋಟೋಗಳನ್ನು ಸಾಕ್ಷಿಯಾಗಿ ಪ್ರದರ್ಶಿಸಿತ್ತು. ಆದರೆ ಹೊಸ ಚಪ್ಪಲಿಯ ಮೇಲಿದ್ದ ಸ್ಟಿಕ್ಕರ್​​ ಕೂಡ ಹಾಗೇ ಇದ್ದಿದ್ದು ಕಂಡುಬಂದಿದ್ದ ಕಾರಣ ಸಾಕ್ಷ್ಯಗಳ ಬಗ್ಗೆಯೇ ಅನುಮಾನ ವ್ಯಕ್ತವಾಗಿದ್ದವು. ಇದೇ ವಿಚಾರ ಕರ್ನಾಟಕ ಸೇರಿ ನೆರೆ ರಾಜ್ಯ ತಮಿಳುನಾಡು ವಿಧಾನಸಭೆಯಲ್ಲೂ ಚರ್ಚೆಯಾಗಿತ್ತು.

ಅರಣ್ಯ ಕಚೇರಿಗಳ ಭದ್ರತೆ ಹೆಚ್ಚಳ
ಮೂವರ ಸಾವಿನ ಬಳಿಕ ದುಷ್ಕರ್ಮಿಗಳು ಅರಣ್ಯ ಇಲಾಖೆಯನ್ನೇ ಟಾರ್ಗೆಟ್​​ ಮಾಡಿರುವ ಹಿನ್ನೆಲೆ ಹನೂರಿನ ಅರಣ್ಯ ಕಚೇರಿ ಹಾಗೂ ವಸತಿ ಗೃಹಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ದುಷ್ಕರ್ಮಿಗಳು 8 ಕಳ್ಳಬೇಟೆ ತಡೆ ಶಿಬಿರ ಸ್ಫೋಟಿಸಿದ್ದ ಕಾರಣ ಅರಣ್ಯ ಇಲಾಖೆ ಕಚೇರಿ ಬಳಿ ಡಿಎಆರ್ ತುಕಡಿ ನಿಯೋಜಿಸಲಾಗಿದೆ. ನಿರಂತರ ದಾಳಿಯಿಂದ ಬೆಚ್ಚಿ ಬಿದ್ದಿರುವ ಅರಣ್ಯ ಇಲಾಖೆ ಸಿಬ್ಬಂದಿ, ಕಾಡಿನೊಳಗೆ ಬೀಟ್ಗೆ ತೆರಳಲೂ ಭಯ ಪಡಬೇಕಾದ ಸ್ಥಿತಿ ಸದ್ಯ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ನಿರ್ಮಾಣವಾಗಿದೆ.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

14 mins ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

5 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

17 hours ago