ಚಾಮರಾಜನಗರ

ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ: ಹೆಚ್ಚಾದ ಕಳ್ಳಬೇಟೆ ಪ್ರಕರಣಗಳು

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ.

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ ಮಹದೇಶ್ವರ ಹಾಗೂ ಕಾವೇರಿ ವನ್ಯಧಾಮಗಳನ್ನು ಒಡೆಲೊಳಗೆ ಇರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹನೂರು ತಾಲ್ಲೂಕು ಅಪಾರ ವನ್ಯ ಸಂಪತ್ತು ಹಾಗೂ ಅಪರೂಪದ ವನ್ಯಜೀವಿಗಳಿಗೆ ಆಶ್ರಯ ತಾಣವಾಗಿದೆ. ಆದರೆ ಇಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಕೊರತೆ ಹೆಚ್ಚಾಗಿದ್ದು, ಕಳ್ಳಬೇಟೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿಗಳಿಗೆ ಹೆಚ್ಚಿನ ಆತಂಕ ಶುರುವಾಗಿದೆ.

ಕಳೆದ ಮೂರು ದಶಕಗಳಿಂದಲೂ ಗಡಿಭಾಗದಲ್ಲಿ ವನ್ಯಜೀವಿಗಳ ಕಳ್ಳಬೇಟೆ ಪ್ರಕರಣಗಳು ನಡೆಯುತ್ತಲೇ ಇವೆ. ಅರಣ್ಯ ಇಲಾಖೆ ಸಿಬ್ಬಂದಿ ಕಳ್ಳಬೇಟೆಗಾರರ ಉಪಟಳ ತಪ್ಪಿಸಿ, ವನ್ಯಸಂಪತ್ತನ್ನು ಉಳಿಸಲು ಎಷ್ಟೇ ಶ್ರಮ ವಹಿಸುತ್ತಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಕೊರತೆಯಿಂದ ಪರಿಣಾಮಕಾರಿಯಾಗಿ ಮಟ್ಟಹಾಕಲು ಇದು ಸಾಧ್ಯವಾಗಿಲ್ಲ.

ಈ ಹಿನ್ನೆಲೆಯಲ್ಲಿ ಕಳ್ಳಬೇಟೆಗಳು ಮತ್ತೆ ಜಾಸ್ತಿಯಾಗಿದ್ದು, ಅಳಿವಿಂಚಿನಲ್ಲಿರುವ ಪ್ರಾಣಿಗಳೇ ಇವರ ಟಾರ್ಗೆಟ್‌ ಆಗಿವೆ. ಇದರ ಜೊತೆಗೆ ಅರಣ್ಯದಂಚಿನ ಜಮೀನಿನಲ್ಲಿ ಈಗ ಬಿತ್ತನೆ ಕಾರ್ಯ ಆರಂಭವಾಗಿದೆ. ಮುಂದೆ ಫಸಲು ಸಮೃದ್ಧವಾಗಿ ಬಂದು ಇನ್ನೇನು ರೈತರ ಕೈ ಸೇರುವಷ್ಟರಲ್ಲಿ ಕಾಡು ಪ್ರಾಣಿಗಳು ಜಮೀನಿನ ಮೇಲೆ ದಾಳಿ ನಡೆಸಿ ಫಸಲನ್ನು ಸಂಪೂರ್ಣವಾಗಿ ಹಾಳು ಮಾಡುತ್ತವೆ.

ಪ್ರಾಣಿಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆದಷ್ಟು ಬೇಗ ಎಚ್ಚೆತ್ತುಕೊಂಡು ಅರಣ್ಯ ಇಲಾಖೆ ಉಳಿವಿಗಾಗಿ ಹಾಗೂ ರೈತರ ಬೆಳೆ ಉಳಿಸಲು ಇಲಾಖೆಗೆ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಬೇಕೆಂದು ಪರಿಸರ ಪ್ರೇಮಿಗಳು ಹಾಗೂ ರೈತರು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

18 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

23 mins ago

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…

26 mins ago

ಹುಲಿ ದಾಳಿ; ಹಸು ಸಾವು

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…

29 mins ago

ಮೈಸೂರು | ಜಿಲ್ಲೆಯಲ್ಲಿ ಅಪೌಷ್ಠಿಕ‌ ಮಕ್ಕಳ ಸಂಖ್ಯೆ ಗಣನೀಯ ಇಳಿಕೆ

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…

31 mins ago

ಅಧಿಕಾರ ಕಿತ್ತಾಟ ಬಿಟ್ಟು ಅಭಿವೃದ್ಧಿ ಚರ್ಚೆ ನಡೆಯಲಿ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…

35 mins ago