ಚಾಮರಾಜನಗರ

ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ: ಹೆಚ್ಚಾದ ಕಳ್ಳಬೇಟೆ ಪ್ರಕರಣಗಳು

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ.

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ ಮಹದೇಶ್ವರ ಹಾಗೂ ಕಾವೇರಿ ವನ್ಯಧಾಮಗಳನ್ನು ಒಡೆಲೊಳಗೆ ಇರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹನೂರು ತಾಲ್ಲೂಕು ಅಪಾರ ವನ್ಯ ಸಂಪತ್ತು ಹಾಗೂ ಅಪರೂಪದ ವನ್ಯಜೀವಿಗಳಿಗೆ ಆಶ್ರಯ ತಾಣವಾಗಿದೆ. ಆದರೆ ಇಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಕೊರತೆ ಹೆಚ್ಚಾಗಿದ್ದು, ಕಳ್ಳಬೇಟೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿಗಳಿಗೆ ಹೆಚ್ಚಿನ ಆತಂಕ ಶುರುವಾಗಿದೆ.

ಕಳೆದ ಮೂರು ದಶಕಗಳಿಂದಲೂ ಗಡಿಭಾಗದಲ್ಲಿ ವನ್ಯಜೀವಿಗಳ ಕಳ್ಳಬೇಟೆ ಪ್ರಕರಣಗಳು ನಡೆಯುತ್ತಲೇ ಇವೆ. ಅರಣ್ಯ ಇಲಾಖೆ ಸಿಬ್ಬಂದಿ ಕಳ್ಳಬೇಟೆಗಾರರ ಉಪಟಳ ತಪ್ಪಿಸಿ, ವನ್ಯಸಂಪತ್ತನ್ನು ಉಳಿಸಲು ಎಷ್ಟೇ ಶ್ರಮ ವಹಿಸುತ್ತಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಕೊರತೆಯಿಂದ ಪರಿಣಾಮಕಾರಿಯಾಗಿ ಮಟ್ಟಹಾಕಲು ಇದು ಸಾಧ್ಯವಾಗಿಲ್ಲ.

ಈ ಹಿನ್ನೆಲೆಯಲ್ಲಿ ಕಳ್ಳಬೇಟೆಗಳು ಮತ್ತೆ ಜಾಸ್ತಿಯಾಗಿದ್ದು, ಅಳಿವಿಂಚಿನಲ್ಲಿರುವ ಪ್ರಾಣಿಗಳೇ ಇವರ ಟಾರ್ಗೆಟ್‌ ಆಗಿವೆ. ಇದರ ಜೊತೆಗೆ ಅರಣ್ಯದಂಚಿನ ಜಮೀನಿನಲ್ಲಿ ಈಗ ಬಿತ್ತನೆ ಕಾರ್ಯ ಆರಂಭವಾಗಿದೆ. ಮುಂದೆ ಫಸಲು ಸಮೃದ್ಧವಾಗಿ ಬಂದು ಇನ್ನೇನು ರೈತರ ಕೈ ಸೇರುವಷ್ಟರಲ್ಲಿ ಕಾಡು ಪ್ರಾಣಿಗಳು ಜಮೀನಿನ ಮೇಲೆ ದಾಳಿ ನಡೆಸಿ ಫಸಲನ್ನು ಸಂಪೂರ್ಣವಾಗಿ ಹಾಳು ಮಾಡುತ್ತವೆ.

ಪ್ರಾಣಿಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆದಷ್ಟು ಬೇಗ ಎಚ್ಚೆತ್ತುಕೊಂಡು ಅರಣ್ಯ ಇಲಾಖೆ ಉಳಿವಿಗಾಗಿ ಹಾಗೂ ರೈತರ ಬೆಳೆ ಉಳಿಸಲು ಇಲಾಖೆಗೆ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಬೇಕೆಂದು ಪರಿಸರ ಪ್ರೇಮಿಗಳು ಹಾಗೂ ರೈತರು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

8 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

11 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

15 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago