ಚಾಮರಾಜನಗರ

ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ: ಹೆಚ್ಚಾದ ಕಳ್ಳಬೇಟೆ ಪ್ರಕರಣಗಳು

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ.

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ ಮಹದೇಶ್ವರ ಹಾಗೂ ಕಾವೇರಿ ವನ್ಯಧಾಮಗಳನ್ನು ಒಡೆಲೊಳಗೆ ಇರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹನೂರು ತಾಲ್ಲೂಕು ಅಪಾರ ವನ್ಯ ಸಂಪತ್ತು ಹಾಗೂ ಅಪರೂಪದ ವನ್ಯಜೀವಿಗಳಿಗೆ ಆಶ್ರಯ ತಾಣವಾಗಿದೆ. ಆದರೆ ಇಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಕೊರತೆ ಹೆಚ್ಚಾಗಿದ್ದು, ಕಳ್ಳಬೇಟೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿಗಳಿಗೆ ಹೆಚ್ಚಿನ ಆತಂಕ ಶುರುವಾಗಿದೆ.

ಕಳೆದ ಮೂರು ದಶಕಗಳಿಂದಲೂ ಗಡಿಭಾಗದಲ್ಲಿ ವನ್ಯಜೀವಿಗಳ ಕಳ್ಳಬೇಟೆ ಪ್ರಕರಣಗಳು ನಡೆಯುತ್ತಲೇ ಇವೆ. ಅರಣ್ಯ ಇಲಾಖೆ ಸಿಬ್ಬಂದಿ ಕಳ್ಳಬೇಟೆಗಾರರ ಉಪಟಳ ತಪ್ಪಿಸಿ, ವನ್ಯಸಂಪತ್ತನ್ನು ಉಳಿಸಲು ಎಷ್ಟೇ ಶ್ರಮ ವಹಿಸುತ್ತಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಕೊರತೆಯಿಂದ ಪರಿಣಾಮಕಾರಿಯಾಗಿ ಮಟ್ಟಹಾಕಲು ಇದು ಸಾಧ್ಯವಾಗಿಲ್ಲ.

ಈ ಹಿನ್ನೆಲೆಯಲ್ಲಿ ಕಳ್ಳಬೇಟೆಗಳು ಮತ್ತೆ ಜಾಸ್ತಿಯಾಗಿದ್ದು, ಅಳಿವಿಂಚಿನಲ್ಲಿರುವ ಪ್ರಾಣಿಗಳೇ ಇವರ ಟಾರ್ಗೆಟ್‌ ಆಗಿವೆ. ಇದರ ಜೊತೆಗೆ ಅರಣ್ಯದಂಚಿನ ಜಮೀನಿನಲ್ಲಿ ಈಗ ಬಿತ್ತನೆ ಕಾರ್ಯ ಆರಂಭವಾಗಿದೆ. ಮುಂದೆ ಫಸಲು ಸಮೃದ್ಧವಾಗಿ ಬಂದು ಇನ್ನೇನು ರೈತರ ಕೈ ಸೇರುವಷ್ಟರಲ್ಲಿ ಕಾಡು ಪ್ರಾಣಿಗಳು ಜಮೀನಿನ ಮೇಲೆ ದಾಳಿ ನಡೆಸಿ ಫಸಲನ್ನು ಸಂಪೂರ್ಣವಾಗಿ ಹಾಳು ಮಾಡುತ್ತವೆ.

ಪ್ರಾಣಿಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆದಷ್ಟು ಬೇಗ ಎಚ್ಚೆತ್ತುಕೊಂಡು ಅರಣ್ಯ ಇಲಾಖೆ ಉಳಿವಿಗಾಗಿ ಹಾಗೂ ರೈತರ ಬೆಳೆ ಉಳಿಸಲು ಇಲಾಖೆಗೆ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಬೇಕೆಂದು ಪರಿಸರ ಪ್ರೇಮಿಗಳು ಹಾಗೂ ರೈತರು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 mins ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

7 hours ago