ಚಾಮರಾಜನಗರ

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ಎರಡು ಕೋಟಿ ಸಂಗ್ರಹ!

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.80 ಕೋಟಿ ರೂ. ಸಂಗ್ರಹವಾಗಿದೆ.

ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.
ಎಣಿಕೆ ಕಾರ್ಯವು ಸಂಜೆ 7:00 ಗಂಟೆಯವರೆಗೂ ನಡೆಯಿತು.

ಮಹಾನವಮಿ, ಆಯುಧ ಪೂಜೆ ವಿಜಯದಶಮಿ, ದಸರಾ ರಜಾ ದಿನಗಳು, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,00,80,844 ನಗದು 30 ಗ್ರಾಂ ಚಿನ್ನ ಹಾಗೂ 1,865 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇದಲ್ಲದೆ ಇ ಹುಂಡಿಯಿಂದ 2,74,204 ಒಮಾನ್ 10 ನೋಟು ಸೇರಿದಂತೆ ಇತರೆ ದೇಶಗಳ ನೋಟುಗಳು ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 22 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು,ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಶ್ವೇತಾ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago