ಚಾಮರಾಜನಗರ

ಗಡಿಜಿಲ್ಲೆಯಲ್ಲಿ ೫೭ ಮಂದಿಗೆ ಕುಡುಗೋಲು ರೋಗ ಪತ್ತೆ

ಚಾಮರಾಜನಗರ : ಜಿಲ್ಲೆಯ ೫೭ ಮಂದಿಗೆ ಕುಡುಗೋಲು ರೋಗ ಕಾಣಿಸಿಕೊಂಡಿದ್ದು, ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಶುರುವಾಗಿದೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಬಳಿಗಿರಿರಂಗನ ಬೆಟ್ಟ, ಕನ್ನೇರಿ ಕಾಲನಿ, ಪುಣಜನೂರು ಮದ್ದೂರು ಕಾಲನಿ, ಮಹದೇಶ್ವರ ಬೆಟ್ಟ ಸೇರಿ ಇನ್ನಿತರ ಪ್ರದೇಶದಲ್ಲಿ ಅಂದಾಜು ೨೩ ಸಾವಿರಕ್ಕೂ ಹೆಚ್ಚು ಸೋಲಿಗ ಜನರಿದ್ದು, ಈ ಪೈಕಿ ಮಗುವಿನಿಂದ ೪೦ ವರ್ಷದವರೆಗಿನ ೧೧೭೭೦ ಮಂದಿಗೆ ತಪಾಸಣೆ ಮಾಡಲಾಗಿದ್ದು, ಇದರಲ್ಲಿ ೫೭ ಮಂದಿಗೆ ಪಾಸಿಟವ್‌ ಬಂದಿದೆ ಎಂದು ಇಲಾಖೆ ತಿಳಿಸಿದೆ.

ಬುಡಕಟ್ಟು ಜನಾಂಗದಲ್ಲಿರುವವರಿಗೆ ಹೆಚ್ಚಾಗಿ ಈ ಕುಡುಗೋಲು ರೋಗ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಸರ್ಕಾರದಿಂದ ಜಿಲ್ಲೆಯಲ್ಲಿ ೧೨ ಸಾವಿರ ಮಂದಿಗೆ ತಪಾಸಣೆ ಮಾಡುವ ಗುರಿಯನ್ನ ಹೊಂದಿದ್ದು, ಈಗಾಗಲೇ ೧೧೭೭೦ ಮಂದಿಗೆ ತಪಾಸಣೆ ಮಾಡಲಾಗಿದೆ. ಈ ರೋಗವನ್ನ ತಡೆಗಟ್ಟುವ ಸಲುವಾಗಿ ನಿತಂತರವಾಗಿ ಸರ್ಕಾರದಿಂದ ತಪಾಸಣೆಯ ಜೊತೆಗೆ ಜಾಗೃತಿ ಸಹ ಮೂಡಿಸುವ ಕೆಲಸ ಆಗುತ್ತಿದೆ.

ಇದೊಂದು ಅನುವಂಶಿಕ ಕಾಯಿಲೆಯಾಗಿದ್ದು, ಇದರಲ್ಲಿ ಕೆಂಪು ರಕ್ತ ಕಣಗಳು ಕುಡುಗೋಲು ಆಕಾರದಲ್ಲಿರುವುದರಿಂದ ಇದಕ್ಕೆ ಕುಡುಗೋಲು ರೋಗ ಎನ್ನಲಾಗುತ್ತದೆ. ಈ ರೋಗ ಲಕ್ಷಣವಿರುವ ಪೋಷಕರಿಂದ ಮಕ್ಕಳಿಗೆ ಬರಲಿದ್ದು, ಈ ರೋಗದ ಲಕ್ಷಣವಿರುವ ಹುಡುಗ-ಹುಡುಗಿ ಮದುವೆಯಾದರೂ ಅವರಿಂದ ಅವರ ಮಕ್ಕಳಿಗೆ ಬರಲಿದೆ. ಈಗಾಗಿ ಇದನ್ನ ತಡೆಗಟ್ಟಲು ಪ್ರತಿಯೊಬ್ಬರಿಗೂ ಸಿಕೆಲ್‌ ಸೆಲ್‌ ಅನಿಮಿಯಾ ಕಾರ್ಡ್‌ ಗಳನ್ನ ವಿತರಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ೧೦೦ ಮಂದಿಗೆ ಈ ಕಾರ್ಡ್‌ ವಿತರಿಸಲಾಗಿದ್ದು, ಇದರಿಂದ ರೋಗಿಗಳು ಶೀಘ್ರವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಈ ಕಾರ್ಡ್‌ ಮೂಲಕ ಉಚಿತ ಚಿಕಿತ್ಸಾ ಸೇವೆಗಳು, ಔಷಧ ಪಡೆಯಲು ಹಾಗೂ ಸರ್ಕಾರದ ಯೋಜನೆಗಳನ್ನ ಪಡೆದುಕೊಳ್ಳಬಹುದಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

19 mins ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

1 hour ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

1 hour ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

1 hour ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

2 hours ago