ಚಾಮರಾಜನಗರ

ಗಡಿಜಿಲ್ಲೆಯಲ್ಲಿ ೫೭ ಮಂದಿಗೆ ಕುಡುಗೋಲು ರೋಗ ಪತ್ತೆ

ಚಾಮರಾಜನಗರ : ಜಿಲ್ಲೆಯ ೫೭ ಮಂದಿಗೆ ಕುಡುಗೋಲು ರೋಗ ಕಾಣಿಸಿಕೊಂಡಿದ್ದು, ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಶುರುವಾಗಿದೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಬಳಿಗಿರಿರಂಗನ ಬೆಟ್ಟ, ಕನ್ನೇರಿ ಕಾಲನಿ, ಪುಣಜನೂರು ಮದ್ದೂರು ಕಾಲನಿ, ಮಹದೇಶ್ವರ ಬೆಟ್ಟ ಸೇರಿ ಇನ್ನಿತರ ಪ್ರದೇಶದಲ್ಲಿ ಅಂದಾಜು ೨೩ ಸಾವಿರಕ್ಕೂ ಹೆಚ್ಚು ಸೋಲಿಗ ಜನರಿದ್ದು, ಈ ಪೈಕಿ ಮಗುವಿನಿಂದ ೪೦ ವರ್ಷದವರೆಗಿನ ೧೧೭೭೦ ಮಂದಿಗೆ ತಪಾಸಣೆ ಮಾಡಲಾಗಿದ್ದು, ಇದರಲ್ಲಿ ೫೭ ಮಂದಿಗೆ ಪಾಸಿಟವ್‌ ಬಂದಿದೆ ಎಂದು ಇಲಾಖೆ ತಿಳಿಸಿದೆ.

ಬುಡಕಟ್ಟು ಜನಾಂಗದಲ್ಲಿರುವವರಿಗೆ ಹೆಚ್ಚಾಗಿ ಈ ಕುಡುಗೋಲು ರೋಗ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಸರ್ಕಾರದಿಂದ ಜಿಲ್ಲೆಯಲ್ಲಿ ೧೨ ಸಾವಿರ ಮಂದಿಗೆ ತಪಾಸಣೆ ಮಾಡುವ ಗುರಿಯನ್ನ ಹೊಂದಿದ್ದು, ಈಗಾಗಲೇ ೧೧೭೭೦ ಮಂದಿಗೆ ತಪಾಸಣೆ ಮಾಡಲಾಗಿದೆ. ಈ ರೋಗವನ್ನ ತಡೆಗಟ್ಟುವ ಸಲುವಾಗಿ ನಿತಂತರವಾಗಿ ಸರ್ಕಾರದಿಂದ ತಪಾಸಣೆಯ ಜೊತೆಗೆ ಜಾಗೃತಿ ಸಹ ಮೂಡಿಸುವ ಕೆಲಸ ಆಗುತ್ತಿದೆ.

ಇದೊಂದು ಅನುವಂಶಿಕ ಕಾಯಿಲೆಯಾಗಿದ್ದು, ಇದರಲ್ಲಿ ಕೆಂಪು ರಕ್ತ ಕಣಗಳು ಕುಡುಗೋಲು ಆಕಾರದಲ್ಲಿರುವುದರಿಂದ ಇದಕ್ಕೆ ಕುಡುಗೋಲು ರೋಗ ಎನ್ನಲಾಗುತ್ತದೆ. ಈ ರೋಗ ಲಕ್ಷಣವಿರುವ ಪೋಷಕರಿಂದ ಮಕ್ಕಳಿಗೆ ಬರಲಿದ್ದು, ಈ ರೋಗದ ಲಕ್ಷಣವಿರುವ ಹುಡುಗ-ಹುಡುಗಿ ಮದುವೆಯಾದರೂ ಅವರಿಂದ ಅವರ ಮಕ್ಕಳಿಗೆ ಬರಲಿದೆ. ಈಗಾಗಿ ಇದನ್ನ ತಡೆಗಟ್ಟಲು ಪ್ರತಿಯೊಬ್ಬರಿಗೂ ಸಿಕೆಲ್‌ ಸೆಲ್‌ ಅನಿಮಿಯಾ ಕಾರ್ಡ್‌ ಗಳನ್ನ ವಿತರಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ೧೦೦ ಮಂದಿಗೆ ಈ ಕಾರ್ಡ್‌ ವಿತರಿಸಲಾಗಿದ್ದು, ಇದರಿಂದ ರೋಗಿಗಳು ಶೀಘ್ರವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಈ ಕಾರ್ಡ್‌ ಮೂಲಕ ಉಚಿತ ಚಿಕಿತ್ಸಾ ಸೇವೆಗಳು, ಔಷಧ ಪಡೆಯಲು ಹಾಗೂ ಸರ್ಕಾರದ ಯೋಜನೆಗಳನ್ನ ಪಡೆದುಕೊಳ್ಳಬಹುದಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago