ಚಾಮರಾಜನಗರ

ಹನೂರು: ಉಡುತೊರೆ ಎಡದಂಡೆ, ಬಲದಂಡೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಹನೂರು: ತಾಲೂಕಿನ ಉಡುತೊರೆ ಜಲಾಶಯ ವ್ಯಾಪ್ತಿಗೆ ಬರುವ ಎಡ ಹಾಗೂ ಬಲದಂಡೆ ಕಾಲುವೆಗಳ ಹೂಳು ತೆಗೆಯುವ ಕಾಮಗಾರಿಗೆ ಶಾಸಕ ಎಂ ಆರ್ ಮಂಜುನಾಥ್ ರವರು ಚಾಲನೆ ನೀಡಿದರು.

ನಂತರ ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ಕಳೆದ ಎರಡು ತಿಂಗಳ ಹಿಂದೆ ಉತ್ತಮ ಮಳೆಯಾದ ಹಿನ್ನೆಲೆ ಉಡುತೊರೆ ಜಲಾಶಯ ಬಹುತೇಕ ಭರ್ತಿಯಾಗಿತ್ತು. ಆದರೆ ಜಲಾಶಯದ ಕಾಲುವೆಗಳು ಮುಚ್ಚು ಹೋಗಿದೆ. ಇನ್ನು ಕೆಲವು ಕಡೆ ಗಿಡಗಂಟಿಗಳು ಬೆಳೆದಿರುವುದರಿಂದ ರೈತರುಗಳಿಗೆ ಅನುಕೂಲ ಕಲ್ಪಿಸಲು ಹಾಗೂ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಜಲಾಶಯದಿಂದ ನೀರು ಬಿಟ್ಟಾಗ ರೈತರುಗಳಿಗೆ ಸಮರ್ಪಕ ನೀರು ತಲುಪುತ್ತಿರಲಿಲ್ಲ, ಇದರಿಂದ ನೀರು ವ್ಯರ್ಥವಾಗುತ್ತಿತ್ತು, ಈ ನಿಟ್ಟಿನಲ್ಲಿ ಜಲಾಶಯದ ಹೂಳು ತೆಗೆಯಲು ಕ್ರಿಯ ಯೋಜನೆ ರೂಪಿಸಿ ಅನುಮೋದನೆ ದೊರೆತ ನಂತರ ಹೂಳು ತೆಗೆಯುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜಲಾಶಯದಲ್ಲಿ ಇರುವ ಹನಿ ಹನಿ ನೀರನ್ನು ಕಾಪಾಡಿಕೊಂಡು ಅಂತರ್ಜಲ ಮಟ್ಟ ಹೆಚ್ಚಿಸಿ ರೈತರು ಆರ್ಥಿಕವಾಗಿ ಸದೃಢವಾಗಬೇಕಿದೆ. ಹೂಳು ತೆಗೆದ ನಂತರ ಚಾನಲ್ ಸ್ವಚ್ಛ ಗೊಳಿಸಿದ ನೀರು ಹರಿಸಿದರೆ ಕೊನೆಯ ಭಾಗದವರೆಗೂ ನೀರು ಹರಿದು ರೈತರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಲಾಗಿದೆ ಎಂದರು.

ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ: ಉಡುತೊರೆ ಜಲಾಶಯ ನಿರ್ಮಾಣ ಕಾಮಗಾರಿಗೆ ಸರ್ಕಾರ ರೈತರ ಜಮೀನುಗಳನ್ನು ಈಗಾಗಲೇ ಭೂಸ್ವಾದಿನ ಪಡಿಸಿಕೊಂಡಿದೆ ಈ ನಿಟ್ಟಿನಲ್ಲಿ ಅಜ್ಜೀಪುರ ಹಾಗೂ ಬಸಪ್ಪನ ದೊಡ್ಡಿ ಗ್ರಾಮ ವ್ಯಾಪ್ತಿಯಲ್ಲಿ ಬರುವ ನಾಲೆಗಳ ಸಮೀಪ ಗಿಡ ನೆಡುವುದರಿಂದ ಉತ್ತಮ ಪರಿಸರ ನಿರ್ಮಾಣವಾಗುತ್ತದೆ ಇದಲ್ಲದೆ ದಣಿದು ಬರುವ ರೈತರಿಗೂ ನೆರವಾಗಲಿರುವುದರಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇವೇಳೆ ಅಜ್ಜೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರ ನಾಯಕ್, ಉಪಾಧ್ಯಕ್ಷರಾದ ಪ್ರಭುಸ್ವಾಮಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಚಂದ್ರ ಮುರಳಿ, ರಾಜೇಂದ್ರ, ಸೈಯದ್ ಜಬ್ಬಾರ್, ಕೃಷ್ಣಮೂರ್ತಿ, ಶಿವಮೂರ್ತಿ ರಾಜೇಶ್, ಪಿಡಿಓ ನಂದೀಶ್, ಕಾರ್ಯದರ್ಶಿ ಶ್ರೀನಿವಾಸ್ ಹಾಗೂ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

10 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago