ಹನೂರು: ತಾಲೂಕಿನ ಉಡುತೊರೆ ಜಲಾಶಯ ವ್ಯಾಪ್ತಿಗೆ ಬರುವ ಎಡ ಹಾಗೂ ಬಲದಂಡೆ ಕಾಲುವೆಗಳ ಹೂಳು ತೆಗೆಯುವ ಕಾಮಗಾರಿಗೆ ಶಾಸಕ ಎಂ ಆರ್ ಮಂಜುನಾಥ್ ರವರು ಚಾಲನೆ ನೀಡಿದರು.
ನಂತರ ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ಕಳೆದ ಎರಡು ತಿಂಗಳ ಹಿಂದೆ ಉತ್ತಮ ಮಳೆಯಾದ ಹಿನ್ನೆಲೆ ಉಡುತೊರೆ ಜಲಾಶಯ ಬಹುತೇಕ ಭರ್ತಿಯಾಗಿತ್ತು. ಆದರೆ ಜಲಾಶಯದ ಕಾಲುವೆಗಳು ಮುಚ್ಚು ಹೋಗಿದೆ. ಇನ್ನು ಕೆಲವು ಕಡೆ ಗಿಡಗಂಟಿಗಳು ಬೆಳೆದಿರುವುದರಿಂದ ರೈತರುಗಳಿಗೆ ಅನುಕೂಲ ಕಲ್ಪಿಸಲು ಹಾಗೂ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಜಲಾಶಯದಿಂದ ನೀರು ಬಿಟ್ಟಾಗ ರೈತರುಗಳಿಗೆ ಸಮರ್ಪಕ ನೀರು ತಲುಪುತ್ತಿರಲಿಲ್ಲ, ಇದರಿಂದ ನೀರು ವ್ಯರ್ಥವಾಗುತ್ತಿತ್ತು, ಈ ನಿಟ್ಟಿನಲ್ಲಿ ಜಲಾಶಯದ ಹೂಳು ತೆಗೆಯಲು ಕ್ರಿಯ ಯೋಜನೆ ರೂಪಿಸಿ ಅನುಮೋದನೆ ದೊರೆತ ನಂತರ ಹೂಳು ತೆಗೆಯುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜಲಾಶಯದಲ್ಲಿ ಇರುವ ಹನಿ ಹನಿ ನೀರನ್ನು ಕಾಪಾಡಿಕೊಂಡು ಅಂತರ್ಜಲ ಮಟ್ಟ ಹೆಚ್ಚಿಸಿ ರೈತರು ಆರ್ಥಿಕವಾಗಿ ಸದೃಢವಾಗಬೇಕಿದೆ. ಹೂಳು ತೆಗೆದ ನಂತರ ಚಾನಲ್ ಸ್ವಚ್ಛ ಗೊಳಿಸಿದ ನೀರು ಹರಿಸಿದರೆ ಕೊನೆಯ ಭಾಗದವರೆಗೂ ನೀರು ಹರಿದು ರೈತರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಲಾಗಿದೆ ಎಂದರು.
ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ: ಉಡುತೊರೆ ಜಲಾಶಯ ನಿರ್ಮಾಣ ಕಾಮಗಾರಿಗೆ ಸರ್ಕಾರ ರೈತರ ಜಮೀನುಗಳನ್ನು ಈಗಾಗಲೇ ಭೂಸ್ವಾದಿನ ಪಡಿಸಿಕೊಂಡಿದೆ ಈ ನಿಟ್ಟಿನಲ್ಲಿ ಅಜ್ಜೀಪುರ ಹಾಗೂ ಬಸಪ್ಪನ ದೊಡ್ಡಿ ಗ್ರಾಮ ವ್ಯಾಪ್ತಿಯಲ್ಲಿ ಬರುವ ನಾಲೆಗಳ ಸಮೀಪ ಗಿಡ ನೆಡುವುದರಿಂದ ಉತ್ತಮ ಪರಿಸರ ನಿರ್ಮಾಣವಾಗುತ್ತದೆ ಇದಲ್ಲದೆ ದಣಿದು ಬರುವ ರೈತರಿಗೂ ನೆರವಾಗಲಿರುವುದರಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇವೇಳೆ ಅಜ್ಜೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರ ನಾಯಕ್, ಉಪಾಧ್ಯಕ್ಷರಾದ ಪ್ರಭುಸ್ವಾಮಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಚಂದ್ರ ಮುರಳಿ, ರಾಜೇಂದ್ರ, ಸೈಯದ್ ಜಬ್ಬಾರ್, ಕೃಷ್ಣಮೂರ್ತಿ, ಶಿವಮೂರ್ತಿ ರಾಜೇಶ್, ಪಿಡಿಓ ನಂದೀಶ್, ಕಾರ್ಯದರ್ಶಿ ಶ್ರೀನಿವಾಸ್ ಹಾಗೂ ಇನ್ನಿತರರು ಹಾಜರಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…