ಚಾಮರಾಜನಗರ: ವರದಕ್ಷಿಣೆ ನೀಡಿಲ್ಲ ಎಂಬ ಕಾರಣಕ್ಕೆ ಮಾವನ ಮನೆಯ ಮುಂದೆ ನಿಂತಿದ್ದ ಎರಡು ಬೈಕ್ಗಳಿಗೆ ಅಳಿಯ ಬೆಂಕಿ ಹಚ್ಚಿದ ಘಟನೆ ಚಾಮರಾಜನಗರದ ಗಾಳಿಪುರದ ಅಬ್ದುಲ್ ಕಲಾಂ ನಗರದಲ್ಲಿ ಜರುಗಿದೆ.
ಹತೀಜಾ ಖೂಬ್ರಳ ಹಾಗೂ ಮೊಹಮ್ಮದ್ ಷರೀಪ್ ಕಳೆದು ಏಳು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಮದುವೆ ಬಳಿಕ ಹಣ ಹಾಗೂ ಚಿನ್ನಭರಣಕ್ಕೆ ಮಾವ ಹಾಗೂ ಹೆಂಡತಿಯನ್ನು ಒತ್ತಾಯಿಸುತ್ತಿದ್ದ ಎನ್ನಲಾಗಿದೆ.
ಈ ಹಿನ್ನಲೆ ತಡರಾತ್ರಿ ಮಾನವ ಮನೆಯ ಮುಂದೆ ಬಂದ ಅಳಿಯ ಮನೆಯ ಮುಂದಿದ್ದ ಬೈಕಿಗೆ ಬೆಂಕಿ ಹಚ್ಚಿದ್ದಾನೆ. ಅಲ್ಲದೇ ತಡೆಯಲು ಹೋದ ಅತ್ತೆಯ ಕೈಯನ್ನೂ ಮುರಿದು ಹಾಕಿದ್ದಾನೆ. ಸದ್ಯ ಬೈಕ್ಗಳು ಧಗಧಗ ಉರಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಹಿಂದೆಯೇ ಅಳಿಯನ ಗೋಳು ಸಹಿಸಲಾಗದೇ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಪೊಲೀಸರು ವಿಚಾರಣೆ ನಡೆಸಿರಲಿಲ್ಲ. ಈಗಲಾದರೂ ಪೊಲೀಸರು ಅಳಿಯರ ರಂಪಾಟವನ್ನು ತಡೆದು ಅವನಿಗೆ ಬುದ್ದಿ ಕಲಿಸಲಿ ಎಂದು ಕುಟುಂಬದವರು ಮನವಿ ಮಾಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…