ಚಾಮರಾಜನಗರ: ಏಪ್ರಿಲ್.24ರಂದು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಆಗ್ರಹಿಸಿದ್ದಾರೆ.
ಇದೇ ಏಪ್ರಿಲ್.24ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಗಡಿ ಜಿಲ್ಲೆಗೆ ಹೆಚ್ಚಿನ ಪ್ಯಾಕೇಜ್ ಘೋಷಿಸುವ ನಿರೀಕ್ಷೆಯಿದೆ.
ಈ ಸಂಬಂಧ ಮಾತನಾಡಿರುವ ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜು ಅವರು, ಸಿಎಂ ಅನಾರೋಗ್ಯ ಸೇರಿದಂತೆ ಇತರೆ ಕಾರಣವೊಡ್ಡಿ ಕ್ಯಾಬಿನೆಟ್ ಮೀಟಿಂಗ್ ಮುಂದೂಡಿಕೆ ಮಾಡಲಾಗಿತ್ತು. ಕ್ಯಾಬಿನೆಟ್ ಮೀಟಿಂಗ್ ಸಿದ್ದತೆಗಾಗಿ ಜಿಲ್ಲಾಡಳಿತದ ವತಿಯಿಂದ ಹತ್ತಾರು ಕೋಟಿ ರೂಗಳ ವೆಚ್ಚ ಮಾಡಿ ಸಿದ್ದತಾ ಕೆಲಸ ಮಾಡಿದ್ದರು. ಆದರೆ ಮೂರ್ನಾಲ್ಕು ಬಾರಿ ಮುಂದೂಡಿಕೊಂಡು ಬಂದರು. ಈಗ ಏ.24ರಂದು ಸಭೆ ನಡೆಸಲು ದಿನಾಂಕ ನಿಗದಿಯಾಗಿದೆ. ಅದರಂತೆ ಸರ್ಕಾರ ನಡೆದುಕೊಳ್ಳಬೇಕು. ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ರೈತರ ಹಲವಾರು ಬೇಡಿಕೆಗಳಿಗೆ ಈಡೇರಿಸಬೇಕು ಎಂದು ಆಗ್ರಹಿಸಿದರು.
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…