ಚಾಮರಾಜನಗರ

ಮಹಾಲಯ ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ

ಹನೂರು: ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನೆರವೇರಿತು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಬೇಡಗಂಪಣ ಸರದಿ ಅರ್ಚಕರ ಅಧ್ಯಕ್ಷತೆಯಲ್ಲಿ ಮಹದೇಶ್ವರನಿಗೆ ಮುಂಜಾನೆಯಿಂದಲೆ ಬಿಲ್ವಪತ್ರೆ, ಹಾಲು ಮೊಸರು ಸೇರಿದಂತೆ ಇನ್ನಿತರ ಅಭಿಷೇಕದ ವಿಶೇಷ ಪೂಜೆ ಕಾರ್ಯಕ್ರಮಗಳು, ದೂಪದ ಸೇವೆ ಮಹಾಮಂಗಳಾರತಿ ಸಂಭ್ರಮ ಸಡಗರದಿಂದ ನಡೆಯಿತು.

ವಿಶೇಷ ಉತ್ಸವಗಳು : ಮಹಾಲಯ ಅಮಾವಾಸ್ಯೆ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಪೂಜಾ ಕಾರ್ಯಕ್ರಮಗಳ ಜೊತೆ ಹರಕೆ ಹೊತ್ತ ಸಾರ್ವಜನಿಕರು ಬೆಳಗ್ಗೆ 8:00 ಗಂಟೆ ಸಮಯದಲ್ಲಿ ಬೆಳ್ಳಿ ರಥೋತ್ಸವ ಹಾಗೂ ಹುಲಿವಾಹನ ಉತ್ಸವ ಮತ್ತು ರುದ್ರಾಕ್ಷಿ ಮಂಟಪೋತ್ಸವ, ಮಲೆ ಮಹದೇಶ್ವರ ಉತ್ಸವ ಬಸವ, ಮುಡಿಸೇವೆ, ದೂಪದ ಸೇವೆ, ಪಂಜಿನ ಸೇವೆ ಹಾಗೂ ಉರುಳು ಸೇವೆ ಸಲ್ಲಿಸಿ ಉಘೇ ಮಾದಪ್ಪ ಉಘೇ ಎಂದು ನಾಮಸ್ಮರಣೆ ಮಾಡುವ ಮೂಲಕ ಜಯ ಘೋಷ ಹಾಕಿದರು.

ಗಮನಸೆಳೆದ ವಿಶೇಷ ಅಲಂಕಾರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ದೇವಾಲಯದ ಆವರಣ ಸುತ್ತಲಿನ ಪ್ರದೇಶಗಳಲ್ಲಿ ವಿಶೇಷ ಹೂವಿನ ಅಲಂಕಾರ ವಿವಿಧ ಫಲ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು.

ವಿಶೇಷ ದಾಸೋಹ : ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಬರುವ ಸಾರ್ವಜನಿಕರಿಗೆ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸುವ ಮೂಲಕ ಬೆಳಗಿನ ಉಪಹಾರ ಕಾರ ಪೊಂಗಲ್, ಸಿಹಿ ಪೊಂಗಲ್, ತರಕಾರಿ ಬಾತ್, ಪುಳಿಯೋಗರೆ, ಮೊಸರನ್ನ ಹಾಗೂ ಮಧ್ಯಾಹ್ನ ಉಪಹಾರ, ಅನ್ನ ಸಾಂಬಾರು, ಮೊಸರು ಹುಳಿ, ರಸಂ, ತರಕಾರಿ ಪಲ್ಯವನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿತರಿಸಲಾಯಿತು.

ಇನ್ನು ಮಹಾಲಯ ಅಮಾವಾಸ್ಯೆ ಪ್ರಯುಕ್ತ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ತಮಿಳುನಾಡಿನಿಂದಲೂ ಸಹ ಲಕ್ಷಾಂತರ ಜನರು ಆಗಮಿಸುವ ಮೂಲಕ ಸರದಿ ಸಾಲಿನಲ್ಲಿ ನಿಂತು ಮಲೆ ಮಹದೇಶ್ವರರ ದರ್ಶನ ಪಡೆದರು. ಶ್ರೀ ಕ್ಷೇತ್ರದಲ್ಲಿ ಎತ್ತ ನೋಡಿದರೂ ಮಹದೇಶ್ವರರ ಬೆಟ್ಟದಲ್ಲಿ ಭಾರೀ ಜನ ಸಮೂಹವೇ ನೆರದಿತ್ತು.

ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದ ಕಾರ್ಯದರ್ಶಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ಶ್ರೀ ಮಹಾಲಯ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸಿದ್ದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲು ಪ್ರಾಧಿಕಾರದ ಕಾರ್ಯದರ್ಶಿ ರಘುರವರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು. ಪ್ರತಿ ಗಂಟೆಗೊಮ್ಮೆ ರಾಜಗೋಪುರ, ಹಿರಿಯ ನಾಗರಿಕರ ವಿಶೇಷ ದರ್ಶನ, ಧರ್ಮದರ್ಶನ, ವಿಶೇಷ ಚೇತನರ ಲೈನ್ಗಳನ್ನು ಪರಿಶೀಲನೆ ಮಾಡಿ ಯಾವುದೇ ನೂಕು ನುಗ್ಗಲು ಆಗದಂತೆ ಕ್ರಮವಹಿಸಲು ಸಿಬ್ಬಂದಿಗಳಿಗೆ ಸೂಚನೆ ನೀಡುತ್ತಿದ್ದರು.

೨.೫ ಲಕ್ಷ ಲಾಡು ಮಾರಾಟ: ಮಹಾಲಯ ಅಮಾವಾಸ್ಯೆ ಜಾತ್ರೆ ಮಹೋತ್ಸವ ಹಿನ್ನೆಲೆ ಒಂದು ಲಕ್ಷಕ್ಕೂ ಹೆಚ್ಚು ಲಾಡು ಶೇಖರಣೆ ಮಾಡಲಾಗಿತ್ತು .ಇದರ ಜೊತೆಗೆ ಹೆಚ್ಚಿನ ಸಿಬ್ಬಂದಿಗಳನ್ನು ಬಳಕೆ ಮಾಡಿಕೊಂಡು ಒಂದುವರೆ ಲಕ್ಷ ಲಾಡು ತಯಾರು ಮಾಡಲಾಗಿತ್ತು ಬುಧವಾರ ಸಂಜೆಯವರೆಗೆ ೨.೫ ಲಕ್ಷ ಲಾಡು ಮಾರಾಟವಾಗಿದೆ ಎಂದು ತಿಳಿದು ಬಂದಿದೆ.

ಸ್ವಚ್ಛತೆಗೆ ಹೆಚ್ಚಿನ ಒತ್ತು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸಿ ದೇವಾಲಯದ ಹೊರ ಆವರಣದಲ್ಲಿ ಪೂಜೆ ಸಲ್ಲಿಸಿ ಬಿಸಾಡಿದ್ದ ತ್ಯಾಜ್ಯ ಪದಾರ್ಥಗಳು ಹಾಗೂ ಪಾದ ರಕ್ಷಗಳನ್ನು ಎಲ್ಲೆಂದರಲ್ಲಿ ಬಿಟ್ಟಿದ್ದರಿಂದ ಸ್ವಚ್ಛತೆ ಮಾಡಲು ಪೌರಕಾರ್ಮಿಕ ಸಿಬ್ಬಂದಿಗಳನ್ನು ನೇಮಕ ಮಾಡಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು.

ಮಹಾಲಯ ಅಮಾವಾಸ್ಯೆ ಪ್ರಯುಕ್ತ ಯಾವುದೇ ಅಹಿತಕರ ಘಟನೆಯಾಗದಂತೆ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರರವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

10 mins ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

17 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

20 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

22 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

22 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

22 hours ago