ಚಾಮರಾಜನಗರ

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ ಬಸವನ ಮೂರ್ತಿ ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಮೆರವಣಿಗೆ ಮಾಡಿದರು.

ಬೆಳಿಗ್ಗೆ ಗ್ರಾಮದ ಶ್ರೀಚಂಗೂರು ಮಾರಮ್ಮ ದೇವಾಲಯದಲ್ಲಿ ಗ್ರಾಮಸ್ಥರು ಪೂಜೆ ಸಲ್ಲಿಸಿ ನಂತರ ತಲೆಯ ಮೇಲೆ ಬಸವನ ವಿಗ್ರಹ ಹೊತ್ತು ಮೆರವಣಿಗೆ ಮಾಡಿದರು. ಮನೆ ಮನೆಗಳ ಮುಂದೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಬಸವನ ಮೂರ್ತಿ ಹೊತ್ತ ಯುವಕನ ತಲೆ ಮೇಲೆ ಬಕೆಟ್ ಗಟ್ಟಲೆ ನೀರನ್ನು ಸುರಿದರು .ಈ ವೇಳೆ ಜನತೆ ಅಕ್ಕಿ, ತೆಂಗಿನಕಾಯಿ, ಬೆಲ್ಲ , ದವಸ ಧಾನ್ಯಗಳನ್ನು ಮತ್ತು ಹಣವನ್ನು ಕಾಣಿಕೆಯಾಗಿ ನೀಡಿದರು.

ಮೆರವಣಿಗೆ ಉದ್ದಕ್ಕೂ ಉಯ್ಯೋ ಉಯ್ಯೋ ಮಳೆರಾಯ, ಹೂವಿನ ತೋಟಕ್ಕೆ ನೀರಿಲ್ಲ….ಬಾರೋ ಬಾರೋ ಮಳೆರಾಯ, ಬಾಳೆ ತೋಟಕೆ ನೀರಿಲ್ಲ ಎಂಬ ಘೋಷಣೆಯನ್ನು ಕೂಗುತ್ತಾ ತಮಟೆ ಸದ್ದಿಗೆ ಹೆಜ್ಜೆಹಾಕಿ ಗಮನ ಸೆಳೆದರು. ನಂತರ ಗ್ರಾಮದ ಹೊರವಲಯದಲ್ಲಿರುವ ಶ್ರೀಜಡೆಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದರು. ಮೆರವಣಿಗೆ ಸಂದರ್ಭದಲ್ಲಿ ಸಂಗ್ರಹಿಸಲಾದ ದವಸ ಧಾನ್ಯಗಳನ್ನು ಬಳಸಿ ಅಡುಗೆ ಮಾಡಿ (ಪರು ಮಾಡಿ) ಎಲ್ಲರೂ ಪ್ರಸಾದವಾಗಿ ಸ್ವೀಕರಿಸಿದರು. ಗ್ರಾಮದ ನೂರಾರು ಜನರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

2 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

3 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

3 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

4 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

4 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

5 hours ago