ಚಾಮರಾಜನಗರ

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ ಬಸವನ ಮೂರ್ತಿ ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಮೆರವಣಿಗೆ ಮಾಡಿದರು.

ಬೆಳಿಗ್ಗೆ ಗ್ರಾಮದ ಶ್ರೀಚಂಗೂರು ಮಾರಮ್ಮ ದೇವಾಲಯದಲ್ಲಿ ಗ್ರಾಮಸ್ಥರು ಪೂಜೆ ಸಲ್ಲಿಸಿ ನಂತರ ತಲೆಯ ಮೇಲೆ ಬಸವನ ವಿಗ್ರಹ ಹೊತ್ತು ಮೆರವಣಿಗೆ ಮಾಡಿದರು. ಮನೆ ಮನೆಗಳ ಮುಂದೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಬಸವನ ಮೂರ್ತಿ ಹೊತ್ತ ಯುವಕನ ತಲೆ ಮೇಲೆ ಬಕೆಟ್ ಗಟ್ಟಲೆ ನೀರನ್ನು ಸುರಿದರು .ಈ ವೇಳೆ ಜನತೆ ಅಕ್ಕಿ, ತೆಂಗಿನಕಾಯಿ, ಬೆಲ್ಲ , ದವಸ ಧಾನ್ಯಗಳನ್ನು ಮತ್ತು ಹಣವನ್ನು ಕಾಣಿಕೆಯಾಗಿ ನೀಡಿದರು.

ಮೆರವಣಿಗೆ ಉದ್ದಕ್ಕೂ ಉಯ್ಯೋ ಉಯ್ಯೋ ಮಳೆರಾಯ, ಹೂವಿನ ತೋಟಕ್ಕೆ ನೀರಿಲ್ಲ….ಬಾರೋ ಬಾರೋ ಮಳೆರಾಯ, ಬಾಳೆ ತೋಟಕೆ ನೀರಿಲ್ಲ ಎಂಬ ಘೋಷಣೆಯನ್ನು ಕೂಗುತ್ತಾ ತಮಟೆ ಸದ್ದಿಗೆ ಹೆಜ್ಜೆಹಾಕಿ ಗಮನ ಸೆಳೆದರು. ನಂತರ ಗ್ರಾಮದ ಹೊರವಲಯದಲ್ಲಿರುವ ಶ್ರೀಜಡೆಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದರು. ಮೆರವಣಿಗೆ ಸಂದರ್ಭದಲ್ಲಿ ಸಂಗ್ರಹಿಸಲಾದ ದವಸ ಧಾನ್ಯಗಳನ್ನು ಬಳಸಿ ಅಡುಗೆ ಮಾಡಿ (ಪರು ಮಾಡಿ) ಎಲ್ಲರೂ ಪ್ರಸಾದವಾಗಿ ಸ್ವೀಕರಿಸಿದರು. ಗ್ರಾಮದ ನೂರಾರು ಜನರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago