ಚಾಮರಾಜನಗರ: ನಗರದ ದೇವಾಂಗ 2ನೇ ಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 66ನೇ ವರ್ಷದ ಶ್ರೀ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಇಂದು ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ಹಾಗೂ ದೇವರಿಗೆ ಅಭಿಷೇಕ ಮಾಡುವ ಮೂಲಕ ಮಹಾಮಂಗಳಾರತಿ ನೆರವೇರಿಸಲಾಯಿತು.
ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರು ದೇವರಿಗೆ ನಮಸ್ಕರಿಸಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಮಾಡಿದರು. ಶ್ರೀ ಚೌಡೇಶ್ವರಿ ತಾಯಿಗೆ ವಿಶೇಷ ಹೂವಿನ ಅಲಂಕಾರ, ಬೆಳ್ಳಿ ಆಭರಣಗಳನ್ನು ತೊಡಿಸಲಾಗಿದ್ದು, ನೆರೆದಿದ್ದ ಸಾವಿರಾರು ಸಾರ್ವಜನಿಕರು ದೇವರನ್ನು ಕಣ್ತುಂಬಿಕೊಂಡರು. ಇದೇ ಸಂದರ್ಭದಲ್ಲಿ ಬಂದ ಎಲ್ಲಾ ಸಾರ್ವಜನಿಕರಿಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…