ಚಾಮರಾಜನಗರ

ಹನೂರು ತಾಲ್ಲೂಕು ಕೇಂದ್ರದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಮಾಡಲು ಕ್ರಮ: ಸಿಎಂ ಸಿದ್ದರಾಮಯ್ಯ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೂತನ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನೂರು ತಾಲ್ಲೂಕು ಕೇಂದ್ರದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ. ಕಟ್ಟಡ ನಿರ್ಮಾಣ ಮಾಡಲು 8.60 ಕೋಟಿ ಅನುದಾನ ನೀಡಲಾಗಿದೆ. ಹನೂರು ತಾಲ್ಲೂಕು ಕೇಂದ್ರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೂ ಸಹ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗುಂಡಾಲ್ ಜಲಾಶಯ ವ್ಯಾಪ್ತಿಯಲ್ಲಿ ಬರುವ ಸರಣಿ ಕೆರೆಗಳ ಸಮಗ್ರ ಅಭಿವೃದ್ಧಿ, ಪೀಡಲ್ ನಾಲೆಗಳ ಅಭಿವೃದ್ಧಿ ಅಡ್ಡಮೋರಿ ಕಾಮಗಾರಿಗಳ ಅಭಿವೃದ್ಧಿಗೆ 50 ಕೋಟಿ ವೆಚ್ಚದ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಪ್ರಾಧಿಕಾರ ರಚನೆ: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ ರಾಚಪ್ಪಾಜಿ ಹಾಗೂ ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ದೇವಸ್ಥಾನದ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

2 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

2 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

8 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

8 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

8 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

8 hours ago