ಚಾಮರಾಜನಗರ

ಹನೂರು | ಒಂದೇ ದಿನ ನಾಲ್ವರಿಗೆ ಕಚ್ಚಿದ ಬೀದಿ ನಾಯಿ

ಹನೂರು : ಒಂದೇ ದಿನದಲ್ಲಿ ನಾಲ್ವರಿಗೆ ಬೀದಿ ನಾಯಿಗಳು ಕಚ್ಚಿರುವ ಘಟನೆ ತಾಲ್ಲೂಕಿನ ಚೆನ್ನಾಲಿಂಗನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹನೂರು ತಾಲ್ಲೂಕಿನ ಚೆನ್ನಾಲಿಂಗನಹಳ್ಳಿ ಗ್ರಾಮದ ಮಹೇಶ್ (44), ವೆಂಕಟಯ್ಯ (70), ಸಿದ್ದಯ್ಯ (50), ಹಾಗೂ ಚಂದನ್ (12) ಎಂಬ ನಾಲ್ವರು ಬೀದಿ ನಾಯಿ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಗ್ರಾಮದಲ್ಲಿ ಬೀದಿನಾಯಿಗಳು ಹೆಚ್ಚಾಗಿದ್ದು, ಮಕ್ಕಳು ಹಾಗೂ ವಯೋವೃದ್ಧರು ಬೀದಿಯಲ್ಲಿ ಆತಂಕದಲ್ಲಿಯೇ ತಿರುಗಾಡುವ ಸ್ಥಿತಿ ನಿರ್ಮಾಣವಾಗಿದೆ. ಬೀದಿ ನಾಯಿಗಳ ನಿಯಂತ್ರಣ ಮಾಡುವಂತೆ ಗ್ರಾಮ ಪಂಚಾಯತಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಗ್ರಾಮದ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ತುಂಬಾ ತಾತ್ಸಾರ ವಹಿಸುತ್ತಿದ್ದಾರೆ ಎಂದು ಗ್ರಾಮದ ನಿವಾಸಿ ರವಿ ಬೇಸರ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಒಂದೇ ದಿನದಲ್ಲಿ ಗ್ರಾಮದ ನಾಲ್ವರು ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದಾರೆ. ಈ ದುರ್ಘಟನೆಯಿಂದ ಮನನೊಂದ ಸಾರ್ವಜನಿಕರು ಸ್ಥಳೀಯ ಆಡಳಿತ ಹಾಗೂ ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

2 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

5 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

9 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

11 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

13 hours ago