Student goes missing
ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.
ಬೆಂಗಳೂರು ಮೂಲದ ಮೆಡಿಕಲ್ ಕಾಲೇಜೊಂದರಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಇಂದು ಪ್ರವಾಸದ ನಿಮಿತ್ತ ಶಿವನಸಮುದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭ ನಾಲ್ವರು ವಿದ್ಯಾರ್ಥಿಗಳು ನದಿಗೆ ಈಜಲು ಇಳಿದು ಈಜಲು ಸಾಧ್ಯವಾಗದೆ ಪರದಾಡುತ್ತಿದ್ದರು.
ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಕೊಳ್ಳೇಗಾಲ ಅಗ್ನಿಶಾಮಕ ಠಾಣಾಧಿಕಾರಿ ಅರುಣ್ ಕುಮಾರ್ ಅವರ ನೇತೃತ್ವದ ತಂಡವೊಂದು ಸ್ಥಳಕ್ಕೆ ಧಾವಿಸಿ, ಪ್ರಫುಲ್ಲಾ, ತುಷಾರಾ ಮತ್ತು ಪ್ರಮೋದ್ ಎಂಬ ಮೂವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ನಂದಕುಮಾರ್ ಎಂಬ ವಿದ್ಯಾರ್ಥಿ ನಾಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…