ಚಾಮರಾಜನಗರ

ಕೊಳ್ಳೇಗಾಲ| ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆ

ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.

ಬೆಂಗಳೂರು ಮೂಲದ ಮೆಡಿಕಲ್ ಕಾಲೇಜೊಂದರಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಇಂದು ಪ್ರವಾಸದ ನಿಮಿತ್ತ ಶಿವನಸಮುದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭ ನಾಲ್ವರು ವಿದ್ಯಾರ್ಥಿಗಳು ನದಿಗೆ ಈಜಲು ಇಳಿದು ಈಜಲು ಸಾಧ್ಯವಾಗದೆ ಪರದಾಡುತ್ತಿದ್ದರು.

ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಕೊಳ್ಳೇಗಾಲ ಅಗ್ನಿಶಾಮಕ ಠಾಣಾಧಿಕಾರಿ ಅರುಣ್ ಕುಮಾರ್ ಅವರ ನೇತೃತ್ವದ ತಂಡವೊಂದು ಸ್ಥಳಕ್ಕೆ ಧಾವಿಸಿ, ಪ್ರಫುಲ್ಲಾ, ತುಷಾರಾ ಮತ್ತು ಪ್ರಮೋದ್ ಎಂಬ ಮೂವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ನಂದಕುಮಾರ್ ಎಂಬ ವಿದ್ಯಾರ್ಥಿ ನಾಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

22 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

22 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

22 hours ago