ಚಾಮರಾಜನಗರ

ಮ.ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಯಶಸ್ವಿ ; ಜಿಲ್ಲಾಧಿಕಾರಿ ಕಾರ್ಯಕ್ಕೆ ಡಿಸಿಎಂ ಮೆಚ್ಚುಗೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಯಶಸ್ವಿಗೆ ಜಿಲ್ಲಾಧಿಕಾರಿ ಸಿಟಿ ಶಿಲ್ಪಾ ನಾಗ್ ರವರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಬಲಗೈ ಬಂಟನಂತೆ ಹಗಲಿರುಳು ಕಾರ್ಯನಿರ್ವಹಿಸಿ ಯಶಸ್ವಿಗೆ ಕಾರಣಿಭೂತರಾಗಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 24ರಂದು ನಡೆದ ಸಚಿವ ಸಂಪುಟ ಸಭೆಗೆ ಕಳೆದ 15 ದಿನಗಳಿಂದ ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ ವತಿಯಿಂದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಏಪ್ರಿಲ್ 24ರಂದು ನಿಗದಿಯಾಗುತ್ತಿದ್ದಂತೆ ಜಿಲ್ಲಾಧಿಕಾರಿಗಳಾದ ರವರು ಕಾರ್ಯ ಪ್ರವೃತ್ತರಾಗಿ 20 ಸಮಿತಿಗಳು ಹಾಗೂ ಸಚಿವರು ಹಿರಿಯ ಅಧಿಕಾರಿಗಳಿಗೆ ಲೈಸಲಿಂಗ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಿದ್ದರು.

ಏಪ್ರಿಲ್ 21ರ ವರೆಗೂ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೀಪದ ಗಿರಿ ಒಡ್ಡಿನ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಆವರಣದಲ್ಲಿ ಸಚಿವ ಸಂಪುಟ ಸಭೆಗೆ ಸ್ಥಳ ನಿಗದಿ ಮಾಡಲಾಗಿತ್ತು, ಆದರೆ ತಜ್ಞರು ಎತ್ತರದ ಪ್ರದೇಶ ಆಗಿರುವುದರಿಂದ ಇಲ್ಲಿ ಸಭೆ ಮಾಡಲು ಸಾಧ್ಯವಿಲ್ಲ ಎಂದು ಅವರೇ ನೀಡಿದ್ದಾರೆ ಆದರೆ ಇದ್ಧ ಮೂರು ದಿನಗಳ ಕಾಲಾವಕಾಶದಲ್ಲಿ ವಜ್ರಮಲೆ ಭವನದ ಮುಂಭಾಗದ ತೋಟದ ಬಯಲು ಪ್ರದೇಶದಲ್ಲಿ ಮೂರು ದಿನಗಳ ಅವಧಿಯಲ್ಲಿ ಹಗಲಿರುಳು ಶ್ರಮಿಸಿ ಸಚಿವ ಸಂಪುಟ ಸಭೆ, ಮಾಧ್ಯಮ ಗೋಷ್ಠಿ ,ಊಟದ ಹಾಲ್ ಗಳನ್ನು ಪ್ರತ್ಯೇಕವಾಗಿ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾದರು.

ಜಿಲ್ಲಾಧಿಕಾರಿಗಳು ಹಾಗೂ ಪ್ರಾಧಿಕಾರಕ್ಕೆ ಶಾಸಕ ಎಂಆರ್ ಮಂಜುನಾಥ್ ರವರು ಸಹ ಎಲ್ಲ ರೀತಿಯ ಸಹಕಾರ ನೀಡಿ ಸಚಿವ ಸಂಪುಟ ಸಭೆಯ ಯಶಸ್ವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ.

ಡಿಸಿಎಂ ಡಿಕೆ ಮೆಚ್ಚುಗೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ ವತಿಯಿಂದ ಸಚಿವ ಸಂಪುಟ ಸಭೆಯ ಎಲ್ಲಾ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವಗಳಿಗಿಂತಲೂ ವಿಭಿನ್ನವಾಗಿ ಆಕರ್ಷಕ ವಿದ್ಯುತ್ ದೀಪ ಅಲಂಕಾರ, ಸ್ವಾಗತ ಕಮಾನು, ರಾಜಗೋಪುರ ಮಾದರಿಯಲ್ಲಿ ವಿಶಿಷ್ಟವಾಗಿ ಮಾಡಲಾಗಿದ್ದ ಬ್ಯಾನರ್ ನೋಡುಗರ ಕಣ್ಮನ ಸೆಳೆಯುತ್ತಿತ್ತು. ಇವೆಲ್ಲವನ್ನೂ ನೋಡಿ ಡಿಸಿಎಂ ಡಿಕೆ ಶಿವಕುಮಾರ್ ರವರು ಜಿಲ್ಲಾಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆ ಒಟ್ಟಾರೆ ಯಶಸ್ವಿಯಾಗಿದೆ. ಈ ಸಭೆಯ ಯಶಸ್ವಿಗೆ ಹಗಲಿರುಳು ಶ್ರಮಿಸಿದ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೂ ಸಾರ್ವಜನಿಕರು ಪ್ರಸಂಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

4 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

7 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

10 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

13 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

13 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

13 hours ago