ಚಾಮರಾಜನಗರ

ಮ.ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಯಶಸ್ವಿ ; ಜಿಲ್ಲಾಧಿಕಾರಿ ಕಾರ್ಯಕ್ಕೆ ಡಿಸಿಎಂ ಮೆಚ್ಚುಗೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಯಶಸ್ವಿಗೆ ಜಿಲ್ಲಾಧಿಕಾರಿ ಸಿಟಿ ಶಿಲ್ಪಾ ನಾಗ್ ರವರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಬಲಗೈ ಬಂಟನಂತೆ ಹಗಲಿರುಳು ಕಾರ್ಯನಿರ್ವಹಿಸಿ ಯಶಸ್ವಿಗೆ ಕಾರಣಿಭೂತರಾಗಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 24ರಂದು ನಡೆದ ಸಚಿವ ಸಂಪುಟ ಸಭೆಗೆ ಕಳೆದ 15 ದಿನಗಳಿಂದ ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ ವತಿಯಿಂದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಏಪ್ರಿಲ್ 24ರಂದು ನಿಗದಿಯಾಗುತ್ತಿದ್ದಂತೆ ಜಿಲ್ಲಾಧಿಕಾರಿಗಳಾದ ರವರು ಕಾರ್ಯ ಪ್ರವೃತ್ತರಾಗಿ 20 ಸಮಿತಿಗಳು ಹಾಗೂ ಸಚಿವರು ಹಿರಿಯ ಅಧಿಕಾರಿಗಳಿಗೆ ಲೈಸಲಿಂಗ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಿದ್ದರು.

ಏಪ್ರಿಲ್ 21ರ ವರೆಗೂ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೀಪದ ಗಿರಿ ಒಡ್ಡಿನ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಆವರಣದಲ್ಲಿ ಸಚಿವ ಸಂಪುಟ ಸಭೆಗೆ ಸ್ಥಳ ನಿಗದಿ ಮಾಡಲಾಗಿತ್ತು, ಆದರೆ ತಜ್ಞರು ಎತ್ತರದ ಪ್ರದೇಶ ಆಗಿರುವುದರಿಂದ ಇಲ್ಲಿ ಸಭೆ ಮಾಡಲು ಸಾಧ್ಯವಿಲ್ಲ ಎಂದು ಅವರೇ ನೀಡಿದ್ದಾರೆ ಆದರೆ ಇದ್ಧ ಮೂರು ದಿನಗಳ ಕಾಲಾವಕಾಶದಲ್ಲಿ ವಜ್ರಮಲೆ ಭವನದ ಮುಂಭಾಗದ ತೋಟದ ಬಯಲು ಪ್ರದೇಶದಲ್ಲಿ ಮೂರು ದಿನಗಳ ಅವಧಿಯಲ್ಲಿ ಹಗಲಿರುಳು ಶ್ರಮಿಸಿ ಸಚಿವ ಸಂಪುಟ ಸಭೆ, ಮಾಧ್ಯಮ ಗೋಷ್ಠಿ ,ಊಟದ ಹಾಲ್ ಗಳನ್ನು ಪ್ರತ್ಯೇಕವಾಗಿ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾದರು.

ಜಿಲ್ಲಾಧಿಕಾರಿಗಳು ಹಾಗೂ ಪ್ರಾಧಿಕಾರಕ್ಕೆ ಶಾಸಕ ಎಂಆರ್ ಮಂಜುನಾಥ್ ರವರು ಸಹ ಎಲ್ಲ ರೀತಿಯ ಸಹಕಾರ ನೀಡಿ ಸಚಿವ ಸಂಪುಟ ಸಭೆಯ ಯಶಸ್ವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ.

ಡಿಸಿಎಂ ಡಿಕೆ ಮೆಚ್ಚುಗೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ ವತಿಯಿಂದ ಸಚಿವ ಸಂಪುಟ ಸಭೆಯ ಎಲ್ಲಾ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವಗಳಿಗಿಂತಲೂ ವಿಭಿನ್ನವಾಗಿ ಆಕರ್ಷಕ ವಿದ್ಯುತ್ ದೀಪ ಅಲಂಕಾರ, ಸ್ವಾಗತ ಕಮಾನು, ರಾಜಗೋಪುರ ಮಾದರಿಯಲ್ಲಿ ವಿಶಿಷ್ಟವಾಗಿ ಮಾಡಲಾಗಿದ್ದ ಬ್ಯಾನರ್ ನೋಡುಗರ ಕಣ್ಮನ ಸೆಳೆಯುತ್ತಿತ್ತು. ಇವೆಲ್ಲವನ್ನೂ ನೋಡಿ ಡಿಸಿಎಂ ಡಿಕೆ ಶಿವಕುಮಾರ್ ರವರು ಜಿಲ್ಲಾಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆ ಒಟ್ಟಾರೆ ಯಶಸ್ವಿಯಾಗಿದೆ. ಈ ಸಭೆಯ ಯಶಸ್ವಿಗೆ ಹಗಲಿರುಳು ಶ್ರಮಿಸಿದ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೂ ಸಾರ್ವಜನಿಕರು ಪ್ರಸಂಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago