ಚಾಮರಾಜನಗರ

ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ: ಎ.1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು

ಚಾಮರಾಜನಗರ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಇಮ್ಮಡಿ ಮಹದೇವಸ್ವಾಮಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್‌ ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು ನೀಡಿದೆ.

ಇದನ್ನು ಓದಿ: ಸುಳ್ವಾಡಿ ವಿಷ ಪ್ರಸಾದ; ಹಸನಾಗದ ಸಂತಸ್ತರ ಬದುಕು

ಕಳೆದ 2018ರ ಡಿಸೆಂಬರ್.‌14ರಂದು ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ಆಡಳಿತದ ಚುಕ್ಕಾಣಿ ಹಿಡಿಯಲು ಹುನ್ನಾರ ನಡೆಸಿದ್ದ ಇಮ್ಮಡಿ ಮಹದೇವಸ್ವಾಮಿ ಪ್ರಸಾದಕ್ಕೆ ವಿಷ ಬೆರೆಸಿದ್ದನು. ವಿಷ ಪ್ರಸಾದ ಸೇವಿಸಿ 17 ಜನ ಮೃತಪಟ್ಟು, 123ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು.

ಪ್ರಕರಣ ಸಂಬಂಧ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಕಳೆದ ಏಳು ವರ್ಷಗಳಿಂದ ಜೈಲಿನಲ್ಲಿದ್ದ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಮೊರೆ ಹೋಗಿದ್ದ ಮಹದೇವಸ್ವಾಮಿಗೆ ಒಂದು ವರ್ಷದ ಅವಧಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

14 seconds ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

12 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

24 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago