cabinet committing in male mahadeshwara hills highlights
ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ ಎಂದರು.
ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ :
ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.
ಬಿಜೆಪಿಯವರ ಮೇಲೆ ಇಡಿ ದಾಳಿ ಆಗುವುದಿಲ್ಲ:
ಶಾಸಕ ವಿನಯ್ ಕುಲಕರ್ಣಿಯವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇಡಿ ದಾಳಿ ಆಗುವುದಿಲ್ಲ.
ಪ್ರಧಾನಿ ಮೋದಿಯವರು ಕಾಶ್ಮೀರ ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಿರುವುದು ಕಾಣುತ್ತಿದೆ ಎಂದರು.
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…