cabinet committing in male mahadeshwara hills highlights
ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ ಎಂದರು.
ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ :
ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.
ಬಿಜೆಪಿಯವರ ಮೇಲೆ ಇಡಿ ದಾಳಿ ಆಗುವುದಿಲ್ಲ:
ಶಾಸಕ ವಿನಯ್ ಕುಲಕರ್ಣಿಯವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇಡಿ ದಾಳಿ ಆಗುವುದಿಲ್ಲ.
ಪ್ರಧಾನಿ ಮೋದಿಯವರು ಕಾಶ್ಮೀರ ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಿರುವುದು ಕಾಣುತ್ತಿದೆ ಎಂದರು.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…