ಚಾಮರಾಜನಗರ

ಪತ್ನಿ ಜೊತೆ ಸಂಬಂಧ ಶಂಕೆ : ಮಗನಿಂದಲೇ ತಂದೆಯ ಹತ್ಯೆ

ಹನೂರು : ತನ್ನ ಪತ್ನಿಯ ಜೊತೆ ತಂದೆಯೇ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಶಂಕಿಸಿ, ಕಲ್ಲಿನಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಂದನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಪಾಕಿಯನಾಥನ್ (೫೫) ಕೊಲೆಯಾದ ವ್ಯಕ್ತಿ. ಸಂದನಪಾಳ್ಯ ಗ್ರಾಮದ ಜಾನ್ಸನ್ ಜೀವ ಕೊಲೆ ಮಾಡಿದ ವ್ಯಕ್ತಿ. ಈತ ಗಾಯತ್ರಿ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದ. ಆದರೆ, ಈಕೆಯ ಜೊತೆ ತನ್ನ ತಂದೆಯೇ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿ ಆಗಾಗ್ಗೆ ಗಲಾಟೆಗಳು ನಡೆಯುತ್ತಿದ್ದವು.

ಇದೇ ವಿಚಾರವಾಗಿ ಸೆ.೨೧ರ ರಾತ್ರಿ ೮ ಗಂಟೆಯ ವೇಳೆ ತಂದೆಯ ಜೊತೆ ಗಲಾಟೆ ಮಾಡುತ್ತಿದ್ದಾಗ ಜಗಳ ಅತಿರೇಕಕ್ಕೆ ತಿರುಗಿ ಸಮೀಪದಲ್ಲಿಯೇ ಬಿದ್ದಿದ್ದ ಕಲ್ಲನ್ನು ತೆಗೆದುಕೊಂಡು ತಲೆಗೆ ಹೊಡೆದ ಹಿನ್ನೆಲೆಯಲ್ಲಿ ಅಧಿಕ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಈ ಸಂಬಂಧ ಮೃತ ಪಾಕಿಯನಾಥನ್‌ರವರ ಸಹೋದರ ಮೊದಲೈಸ್ವಾಮಿ ಜಾನ್ಸನ್ ಜೀವ ವಿರುದ್ಧ ರಾಮಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಎಸ್‌ಪಿ ಭೇಟಿ: ಸಂದನ ಪಾಳ್ಯ ಗ್ರಾಮದಲ್ಲಿ ತಂದೆಯನ್ನೇ ಮಗ ಕೊಲೆ ಮಾಡಿರುವ ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಡಿವೈಎಸ್ಪಿ ಲಕ್ಷ್ಮಯ್ಯ, ಇನ್‌ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆರೋಪಿ ಬಂಧನ: ತಂದೆಯನ್ನೇ ಕೊಲೆ ಮಾಡಿ ನಾಪತ್ತೆಯಾಗಿದ್ದ ಆರೋಪಿ ಜಾನ್ಸನ್ ಜೀವನನ್ನು ರಾಮಾಪುರ ಠಾಣೆ ಇನ್‌ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ ನೇತೃತ್ವದಲ್ಲಿ ಸಿಬ್ಬಂದಿ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

12 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

24 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

24 hours ago