ಚಾಮರಾಜನಗರ : ಹಿಂದೂ ಧರ್ಮದ ಆಧಾರದ ಮೇಲೆ ನಾವು ವೀರಶೈವ ಲಿಂಗಾಯತರಾಗಿದ್ದೇವೆ. ಪಾಪ ಆ ಸ್ವಾಮೀಜಿ ನಕ್ಸಲೈಟ್ ಆಗಬೇಕಿತ್ತು. ಕಮ್ಯೂನಿಸ್ಟ್ ಆಗಿದ್ದಾರೆ. ದುರ್ದೈವ ಅವರು ಖಾವಿ ಹಾಕಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಚಾಮರಾಜನಗರ ಜಿಲ್ಲೆ ಬರ ಪ್ರವಾಸಕ್ಕೆ ಬಂದ ಸಂದರ್ಭದಲ್ಲಿ ಗಣಪತಿ ನಮ್ಮ ಸಂಸ್ಕೃತಿಯಲ್ಲ ಎಂಬ ಸಾಣೇಹಳ್ಳಿ ಶ್ರೀ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ರಾಜ್ಯೋತ್ಸವ ಪ್ರಶಸ್ತಿ ಸಲುವಾಗಿ ಕೆಲವು ಮಠಾಧೀಶರು ಹಿಂದೂ ವಿರೋಧಿ ಹೇಳಿಕೆ ಕೊಡುತ್ತಿದ್ದಾರೆ. ಮುಂದಿನ ಬಾರಿಯಾದರೂ ಕೊಡಲಿ ಎಂಬುದು ಅವರ ಉದ್ದೇಶವಾಗಿದೆ. ಈಗಾಗಲೇ ಒಬ್ಬ ಸ್ವಾಮೀಜಿಗೆ ಕೊಟ್ಟಿದ್ದಾರೆ. ಪ್ರಶಸ್ತಿ, ಜೀವನ ವೆಚ್ಚ ಎಲ್ಲವನ್ನೂ ಕೊಡುತ್ತಾರೆ ಎಂದು ಹರಿಹಾಯ್ದರು.
ಹಿಂದೂ ಧರ್ಮದ ವಿರುದ್ಧ ಮಾತನಾಡಲೂ ಪೇಯ್ಡ್ ಸಾಹಿತಿಗಳಿದ್ದರೆ, ಪೇಯ್ಡ್ ಭಗವಾಧ್ವಜ ಹಾಕಿಕೊಂಡ ಕಳ್ಳರಿದ್ದಾರೆ. ಹಿಂದೂ ವಿರೋಧಿ ಹೇಳಿಕೆ ಕೊಟ್ಟರೆ ಮಠಕ್ಕೆ ಕೋಟ್ಯಂತರ ರೂ. ಅನುದಾನ ಕೊಡುತ್ತಾರೆ ಎಂಬ ನಂಬಿಕೆ. ಹೀಗಾಗಿ ಹಿಂದೂ ಸನಾತನ ಧರ್ಮದ ಬಗ್ಗೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…