ಗುಂಡ್ಲುಪೇಟೆ : ತಾಲ್ಲೂಕಿನ ತಗ್ಗಲೂರು ಗ್ರಾಮದ ತಮ್ಮಯಪ್ಪ ಎಂಬವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿನಲ್ಲಿ 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.
ತಗ್ಗಲೂರು ಸುತ್ತಮುತ್ತ ಚಿರತೆ ಹಾವಳಿ ಇದ್ದ ಕಾರಣ ಬಫರ್ ವಲಯದ ಅರಣ್ಯಾಧಿಕಾರಿಗಳು ಬೋನು ಇರಿಸಿದ್ದರು. ಕೊನೆಗೂ ಭಾನುವಾರ ಬೆಳಿಗ್ಗೆ ಚಿರತೆ ಬೋನಿನಲ್ಲಿ ಬಂದಿಯಾಗಿದೆ. ಈ ಮೂಲಕ ಗ್ರಾಮಸ್ಥರು ನಿರಾಳರಾಗಿದ್ದಾರೆ.
ಚಿರತೆಯನ್ನು ತಮಿಳುನಾಡು ಗಡಿಭಾಗದ ಬಂಡೀಪುರ ವಲಯದ ಅರಣ್ಯದೊಳಗೆ ಬಿಡಲಾಗಿದೆ ಎಂದು ಬಫರ್ ವಲಯಾಧಿಕಾರಿ ಶಿವಕುಮಾರ್ ತಿಳಿಸಿದರು.





