ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ಕುಡಿಯುವ ನೀರಿನ ಸಂಬಂಧ ಕರೆಯಲಾಗಿದ್ದ ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು.
ಹನೂರು ತಾಲ್ಲೂಕಿನ ಹುತ್ತೂರು, ಮಲೆ ಮಹದೇಶ್ವರ ಬೆಟ್ಟ, ಮಾರ್ಟಳ್ಳಿ, ಕುರಟ್ಟಿ ಹೊಸೂರು, ಶೆಟ್ಟಳ್ಳಿ, ಕೌದಳ್ಳಿ, ಪಿ ಜಿ ಪಾಳ್ಯ, ಎಲ್ಲೇಮಾಳ ಅಜ್ಜೀಪುರ, ರಾಮಾಪುರ, ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಗ್ರಾಮಗಳ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ತಡವಾದರೂ ಕುಡಿಯುವ ನೀರಿಗೆ ಮೊದಲೇ ಆದ್ಯತೆ ನೀಡಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೆ ರೀ ಬೋರ್ ಕೊರೆಸಿ ಸಮಸ್ಯೆಯನ್ನು ಬಗೆಹರಿಸಬೇಕು ಅಗತ್ಯವಿದ್ದರೆ ಮಾತ್ರ ಕೊಳವೆಬಾವಿಗಳನ್ನು ಕೊರೆಸಿ ನೀರು ಪೂರೈಕೆ ಮಾಡಬೇಕು ಎಂದರು.
ಕೊಳವೆಬಾವಿ ಕೊರೆಸಿ ನೀರು ಬಾರದಿದ್ದರೆ ಅಂತಹ ಗ್ರಾಮಗಳಲ್ಲಿ ಖಾಸಗಿ ಬೋರ್ ಗಳ ಮುಖಾಂತರ ನೀರು ಪಡೆದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಬೇಕು. ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದರು.
ಕೊಳವೆಬಾವಿ ಕೊರೆಸಿರುವ ಗ್ರಾಮ ಪಂಚಾಯಿತಿಗಳಲ್ಲಿ ಅನುದಾನವಿದ್ದರೆ ಅತಿ ಶೀಘ್ರದಲ್ಲಿಯೇ ಬೋರ್ವೆಲ್ ಲಾರಿ ಮಾಲೀಕರಿಗೆ ಅನುದಾನ ನೀಡಬೇಕು, ಒಂದೊಮ್ಮೆ ಅನುದಾನ ಇಲ್ಲದಿದ್ದರೆ ನನ್ನ ಗಮನಕ್ಕೆ ತಂದರೆ, ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.
ಇದೆ ವೇಳೆ ತಹಸಿಲ್ದಾರ್ ಚೈತ್ರ, ಇಒ ಉಮೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಧನ್ವ ನಾಗ್, ವ್ಯವಸ್ಥಾಪಕ ರಮೇಶ್, ಕಾರ್ಯಪಾಲಕ ಅಭಿಯಂತರ ಶಶಿಕುಮಾರ್, ಪಿಡಿಒಗಳಾದ ಸುರೇಶ್, ಕಿರಣ್, ರಾಮು, ರಾಜು, ಮಾದೇಶ್, ನಂಜುಂಡಸ್ವಾಮಿ, ಪುಷ್ಪಲತಾ, ಗಂಗಾಧರ್, ರಾಜೇಶ್, ಸಿದ್ದಪ್ಪ, ಡಾ ಶಿವಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…