ಚಾಮರಾಜನಗರ

ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ: ವೆಂಕಟೇಶ್‌ ಬಣ್ಣನೆ

ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಇಂದವಾಡಿ ವೆಂಕಟೇಶ್ ಅಭಿಪ್ರಾಯ

ಗುಂಡ್ಲುಪೇಟೆ: ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಯಾವತ್ತೂ ಸಾವಿಲ್ಲ, ನಾಡಿನಾದ್ಯoತ ತಮ್ಮ ಕಲೆಯನ್ನು ಪಸರಿಸಿರುವ ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರೊ.ಇಂದುವಾಡಿ ವೆಂಕಟೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಶಿಕ್ಷಕರ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಚಪ್ಪಾಜಿ ಜಾನಪದ ಕಲಾಸಂಘದ ವತಿಯಿಂದ ಆಕಾಶವಾಣಿ ‘ಎ’ ಗ್ರೇಡ್ ತಂಬೂರಿ ಕಲಾವಿದರಾದ ದಿ.ಕೆ.ಬಿ. ರಾಚಯ್ಯ ಅವರ 25ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.

ಈ ಮಣ್ಣಿನ ಪರಂಪರೆಯನ್ನು ಎತ್ತಿ ಹಿಡಿಯುತ್ತಿರುವ ಜನಪದ ಕಲಾವಿದರು ನಾಡಿನಾದ್ಯಂತ ಪಸರಿಸಬೇಕು. ಆಕಾಶವಾಣಿ ಎ ಗ್ರೇಡ್ ತಂಬೂರಿ ಹಿರಿಯ ಕಲಾವಿದರಾದ ದಿವಂಗತ ಕೆ.ಬಿ. ರಾಚಯ್ಯನವರಂತೆ ಅವರ ಮಗನಾದ ಸಿದ್ದರಾಜು ಕೂಡ ತಂಬೂರಿ ಕಲಾವಿದರಾಗಿ ಮುಂದುವರಿಯುತ್ತಿರುವುದು ನಿಜಕ್ಕೂ ಶ್ಲಾಘನಿಯ ಎಂದು ಹೇಳಿದರು.

ಈ ನೆಲದ ಮಣ್ಣಿನ ಸೊಗಡೇ ಹಾಗೇ, ಜನಪದವನ್ನು ಉತ್ತಿ ಬೆಳೆಸಿ, ಸಾಕಷ್ಟು ಕಲಾವಿದರನ್ನು ಹುಟ್ಟು ಹಾಕಿದೆ. ಇಂದಿನ ಆಧುನಿಕ ತಂತ್ರಜ್ಞಾನ ಯುಗದ ಭರಾಟೆಯಲ್ಲಿಯೂ ಜನಪದ ಕಲೆಯನ್ನು ಉಳಿಸಿ ಬೆಳೆಸುವಂತಹ ಕೆಲಸ ಹೀಗೆ ಮುಂದುವರಿಯಲಿ ಎಂದು ಹಾರೈಸಿದರು.

ಜಾನಪದ ಅಕಾಡೆಮಿ ಸದಸ್ಯ ಉಮೇಶ್ ಮಾತನಾಡಿ, ಪವಾಡ ಪುರುಷರಾದ ಮಂಟೇಸ್ವಾಮಿ, ಸಿದ್ದಪ್ಪಾಜಿ, ಮಹದೇಶ್ವರ ಸ್ವಾಮಿ ನೆಲೆ ನಿಂತಿರುವ ನಾಡು ಚಾಮರಾಜನಗರ, ಮಂಡ್ಯ, ಮೈಸೂರು ಈ ನೆಲವು ಸಾಕಷ್ಟು ಕಲಾವಿದರನ್ನು ಹುಟ್ಟು ಹಾಕಿ ರಾಷ್ಟ್ರದ್ಯoತ ಈ ನಾಡಿನ ಕಲೆ, ಸಂಸ್ಕೃತಿಯನ್ನು ಪಸರಿಸಿದೆ ಎಂದರು.

 

ಕಾರ್ಯಕ್ರಮದಲ್ಲಿ  ಚಿಕ್ಕಲ್ಲೂರು ಕ್ಷೇತ್ರದ ಭಾರತ್ ಪ್ರಭುರಾಜೇ ಅರಸು ಸ್ವಾಮೀಜಿ, ಕಾಡ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಕೊಳ್ಳೇಗಾಲ ಉಪಖಜಾನಾಧಿಕಾರಿ ಪಿ.ನಾಗರತ್ನಮ್ಮ, ಬೆಂಗಳೂರಿನ ಜಾನಪದ ಸಿರಿ ಚಾನೆಲ್ ನ ಕಾಂತರಾಜು, ಜಾನಪದ ಅಕಾಡೆಮಿ ಸದಸ್ಯರಾದ ಉಮೇಶ್, ಸಮಾಜ ಸೇವಕ ಗಿರೀಶ್ ಬಾಬು, ಸರ್ಕಾರಿ ವೈದ್ಯಾಧಿಕಾರಿ ಸಿ.ಮಹೇಶ್, ಹಸಗೂಲಿ ಸಿದ್ದಯ್ಯ, ಗಾಯಕ ಆರ್. ರವಿಕುಮಾರ್, ರಾಚಪ್ಪಾಜಿ ಜಾನಪದ ಕಲಾ ಸಂಘದ ಅಧ್ಯಕ್ಷರಾದ ಆರ್. ಸಿದ್ದರಾಜು, ಕಾರ್ಯದರ್ಶಿ ಬಾಚಹಳ್ಳಿ ಸೋಮಣ್ಣ, ವಕೀಲರಾದ ಸಿದ್ದಯ್ಯ, ಸಿದ್ದೇಶ್, ಸುಭಾಸ್ ಮಾಡ್ರಹಳ್ಳಿ, ಸಾಹಿತಿ ಕಾಳಿಂಗಸ್ವಾಮಿ, ಉಪನ್ಯಾಸಕಿ ಎಸ್. ಶೃತಿ, ಸುರೇಶ ಕಂದೇಗಾಲ, ಎಸ್. ಬಿ. ನಾಗರಾಜ್, ತಂಬೂರಿ ಕಲಾವಿದರಾದ ಚಿಕ್ಕರಂಗಶೆಟ್ಟಿ, ಮಹಾದೇವಯ್ಯ, ಸೋಬಾನೆ ಕಲಾವಿದರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸನ್ಮಾನಿತರು…

ರಾಜ್ಯ ಪ್ರಶಸ್ತಿ ವಿಜೇತರಾದ ದೊಡ್ಡ ಗವಿಬಸಪ್ಪ, ತಂಬೂರಿ ಕಲಾವಿದರಾದ ಸಿದ್ದರಾಜು, ಸಿದ್ದಶೆಟ್ಟಿ, ನಾಗಯ್ಯ, ಸಿದ್ದರಾಜು, ಸಿದ್ದಯ್ಯ, ಗುರುಸಿದ್ಧಯ್ಯ, ಮಹದೇವನಾಯಕ, ಸಿದ್ದರಾಜು, ರಘು, ಕೈಲಾಸಮೂರ್ತಿ, ಶಿವಕುಮಾರ್, ಶ್ರೀನಿವಾಸ, ಮಾದಯ್ಯ, ಹರಳುಕೂಟಯ್ಯ,  ಬಸವರಾಜು,  ಸೋಬಾನೆ ಕಲಾವಿದರಾದ ದೊಡ್ಡಮ್ಮ, ಬೆಳ್ಳಮ್ಮ, ವೆಂಕಟಮ್ಮ, ಲಕ್ಷ್ಮಮ್ಮ, ರಾಜಮ್ಮ ಅವರನ್ನು ಸನ್ಮಾನಿಸಲಾಯಿತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

1 hour ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

2 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

2 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

3 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

3 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

4 hours ago