ಚಾಮರಾಜನಗರ

ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ: ವೆಂಕಟೇಶ್‌ ಬಣ್ಣನೆ

ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಇಂದವಾಡಿ ವೆಂಕಟೇಶ್ ಅಭಿಪ್ರಾಯ

ಗುಂಡ್ಲುಪೇಟೆ: ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಯಾವತ್ತೂ ಸಾವಿಲ್ಲ, ನಾಡಿನಾದ್ಯoತ ತಮ್ಮ ಕಲೆಯನ್ನು ಪಸರಿಸಿರುವ ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರೊ.ಇಂದುವಾಡಿ ವೆಂಕಟೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಶಿಕ್ಷಕರ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಚಪ್ಪಾಜಿ ಜಾನಪದ ಕಲಾಸಂಘದ ವತಿಯಿಂದ ಆಕಾಶವಾಣಿ ‘ಎ’ ಗ್ರೇಡ್ ತಂಬೂರಿ ಕಲಾವಿದರಾದ ದಿ.ಕೆ.ಬಿ. ರಾಚಯ್ಯ ಅವರ 25ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.

ಈ ಮಣ್ಣಿನ ಪರಂಪರೆಯನ್ನು ಎತ್ತಿ ಹಿಡಿಯುತ್ತಿರುವ ಜನಪದ ಕಲಾವಿದರು ನಾಡಿನಾದ್ಯಂತ ಪಸರಿಸಬೇಕು. ಆಕಾಶವಾಣಿ ಎ ಗ್ರೇಡ್ ತಂಬೂರಿ ಹಿರಿಯ ಕಲಾವಿದರಾದ ದಿವಂಗತ ಕೆ.ಬಿ. ರಾಚಯ್ಯನವರಂತೆ ಅವರ ಮಗನಾದ ಸಿದ್ದರಾಜು ಕೂಡ ತಂಬೂರಿ ಕಲಾವಿದರಾಗಿ ಮುಂದುವರಿಯುತ್ತಿರುವುದು ನಿಜಕ್ಕೂ ಶ್ಲಾಘನಿಯ ಎಂದು ಹೇಳಿದರು.

ಈ ನೆಲದ ಮಣ್ಣಿನ ಸೊಗಡೇ ಹಾಗೇ, ಜನಪದವನ್ನು ಉತ್ತಿ ಬೆಳೆಸಿ, ಸಾಕಷ್ಟು ಕಲಾವಿದರನ್ನು ಹುಟ್ಟು ಹಾಕಿದೆ. ಇಂದಿನ ಆಧುನಿಕ ತಂತ್ರಜ್ಞಾನ ಯುಗದ ಭರಾಟೆಯಲ್ಲಿಯೂ ಜನಪದ ಕಲೆಯನ್ನು ಉಳಿಸಿ ಬೆಳೆಸುವಂತಹ ಕೆಲಸ ಹೀಗೆ ಮುಂದುವರಿಯಲಿ ಎಂದು ಹಾರೈಸಿದರು.

ಜಾನಪದ ಅಕಾಡೆಮಿ ಸದಸ್ಯ ಉಮೇಶ್ ಮಾತನಾಡಿ, ಪವಾಡ ಪುರುಷರಾದ ಮಂಟೇಸ್ವಾಮಿ, ಸಿದ್ದಪ್ಪಾಜಿ, ಮಹದೇಶ್ವರ ಸ್ವಾಮಿ ನೆಲೆ ನಿಂತಿರುವ ನಾಡು ಚಾಮರಾಜನಗರ, ಮಂಡ್ಯ, ಮೈಸೂರು ಈ ನೆಲವು ಸಾಕಷ್ಟು ಕಲಾವಿದರನ್ನು ಹುಟ್ಟು ಹಾಕಿ ರಾಷ್ಟ್ರದ್ಯoತ ಈ ನಾಡಿನ ಕಲೆ, ಸಂಸ್ಕೃತಿಯನ್ನು ಪಸರಿಸಿದೆ ಎಂದರು.

 

ಕಾರ್ಯಕ್ರಮದಲ್ಲಿ  ಚಿಕ್ಕಲ್ಲೂರು ಕ್ಷೇತ್ರದ ಭಾರತ್ ಪ್ರಭುರಾಜೇ ಅರಸು ಸ್ವಾಮೀಜಿ, ಕಾಡ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಕೊಳ್ಳೇಗಾಲ ಉಪಖಜಾನಾಧಿಕಾರಿ ಪಿ.ನಾಗರತ್ನಮ್ಮ, ಬೆಂಗಳೂರಿನ ಜಾನಪದ ಸಿರಿ ಚಾನೆಲ್ ನ ಕಾಂತರಾಜು, ಜಾನಪದ ಅಕಾಡೆಮಿ ಸದಸ್ಯರಾದ ಉಮೇಶ್, ಸಮಾಜ ಸೇವಕ ಗಿರೀಶ್ ಬಾಬು, ಸರ್ಕಾರಿ ವೈದ್ಯಾಧಿಕಾರಿ ಸಿ.ಮಹೇಶ್, ಹಸಗೂಲಿ ಸಿದ್ದಯ್ಯ, ಗಾಯಕ ಆರ್. ರವಿಕುಮಾರ್, ರಾಚಪ್ಪಾಜಿ ಜಾನಪದ ಕಲಾ ಸಂಘದ ಅಧ್ಯಕ್ಷರಾದ ಆರ್. ಸಿದ್ದರಾಜು, ಕಾರ್ಯದರ್ಶಿ ಬಾಚಹಳ್ಳಿ ಸೋಮಣ್ಣ, ವಕೀಲರಾದ ಸಿದ್ದಯ್ಯ, ಸಿದ್ದೇಶ್, ಸುಭಾಸ್ ಮಾಡ್ರಹಳ್ಳಿ, ಸಾಹಿತಿ ಕಾಳಿಂಗಸ್ವಾಮಿ, ಉಪನ್ಯಾಸಕಿ ಎಸ್. ಶೃತಿ, ಸುರೇಶ ಕಂದೇಗಾಲ, ಎಸ್. ಬಿ. ನಾಗರಾಜ್, ತಂಬೂರಿ ಕಲಾವಿದರಾದ ಚಿಕ್ಕರಂಗಶೆಟ್ಟಿ, ಮಹಾದೇವಯ್ಯ, ಸೋಬಾನೆ ಕಲಾವಿದರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸನ್ಮಾನಿತರು…

ರಾಜ್ಯ ಪ್ರಶಸ್ತಿ ವಿಜೇತರಾದ ದೊಡ್ಡ ಗವಿಬಸಪ್ಪ, ತಂಬೂರಿ ಕಲಾವಿದರಾದ ಸಿದ್ದರಾಜು, ಸಿದ್ದಶೆಟ್ಟಿ, ನಾಗಯ್ಯ, ಸಿದ್ದರಾಜು, ಸಿದ್ದಯ್ಯ, ಗುರುಸಿದ್ಧಯ್ಯ, ಮಹದೇವನಾಯಕ, ಸಿದ್ದರಾಜು, ರಘು, ಕೈಲಾಸಮೂರ್ತಿ, ಶಿವಕುಮಾರ್, ಶ್ರೀನಿವಾಸ, ಮಾದಯ್ಯ, ಹರಳುಕೂಟಯ್ಯ,  ಬಸವರಾಜು,  ಸೋಬಾನೆ ಕಲಾವಿದರಾದ ದೊಡ್ಡಮ್ಮ, ಬೆಳ್ಳಮ್ಮ, ವೆಂಕಟಮ್ಮ, ಲಕ್ಷ್ಮಮ್ಮ, ರಾಜಮ್ಮ ಅವರನ್ನು ಸನ್ಮಾನಿಸಲಾಯಿತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

5 mins ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

20 mins ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

1 hour ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

2 hours ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

2 hours ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

2 hours ago