ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಇಂದವಾಡಿ ವೆಂಕಟೇಶ್ ಅಭಿಪ್ರಾಯ
ಗುಂಡ್ಲುಪೇಟೆ: ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಯಾವತ್ತೂ ಸಾವಿಲ್ಲ, ನಾಡಿನಾದ್ಯoತ ತಮ್ಮ ಕಲೆಯನ್ನು ಪಸರಿಸಿರುವ ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರೊ.ಇಂದುವಾಡಿ ವೆಂಕಟೇಶ್ ಅಭಿಪ್ರಾಯಪಟ್ಟರು.
ಪಟ್ಟಣದ ಶಿಕ್ಷಕರ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಚಪ್ಪಾಜಿ ಜಾನಪದ ಕಲಾಸಂಘದ ವತಿಯಿಂದ ಆಕಾಶವಾಣಿ ‘ಎ’ ಗ್ರೇಡ್ ತಂಬೂರಿ ಕಲಾವಿದರಾದ ದಿ.ಕೆ.ಬಿ. ರಾಚಯ್ಯ ಅವರ 25ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಮಣ್ಣಿನ ಪರಂಪರೆಯನ್ನು ಎತ್ತಿ ಹಿಡಿಯುತ್ತಿರುವ ಜನಪದ ಕಲಾವಿದರು ನಾಡಿನಾದ್ಯಂತ ಪಸರಿಸಬೇಕು. ಆಕಾಶವಾಣಿ ಎ ಗ್ರೇಡ್ ತಂಬೂರಿ ಹಿರಿಯ ಕಲಾವಿದರಾದ ದಿವಂಗತ ಕೆ.ಬಿ. ರಾಚಯ್ಯನವರಂತೆ ಅವರ ಮಗನಾದ ಸಿದ್ದರಾಜು ಕೂಡ ತಂಬೂರಿ ಕಲಾವಿದರಾಗಿ ಮುಂದುವರಿಯುತ್ತಿರುವುದು ನಿಜಕ್ಕೂ ಶ್ಲಾಘನಿಯ ಎಂದು ಹೇಳಿದರು.
ಈ ನೆಲದ ಮಣ್ಣಿನ ಸೊಗಡೇ ಹಾಗೇ, ಜನಪದವನ್ನು ಉತ್ತಿ ಬೆಳೆಸಿ, ಸಾಕಷ್ಟು ಕಲಾವಿದರನ್ನು ಹುಟ್ಟು ಹಾಕಿದೆ. ಇಂದಿನ ಆಧುನಿಕ ತಂತ್ರಜ್ಞಾನ ಯುಗದ ಭರಾಟೆಯಲ್ಲಿಯೂ ಜನಪದ ಕಲೆಯನ್ನು ಉಳಿಸಿ ಬೆಳೆಸುವಂತಹ ಕೆಲಸ ಹೀಗೆ ಮುಂದುವರಿಯಲಿ ಎಂದು ಹಾರೈಸಿದರು.
ಜಾನಪದ ಅಕಾಡೆಮಿ ಸದಸ್ಯ ಉಮೇಶ್ ಮಾತನಾಡಿ, ಪವಾಡ ಪುರುಷರಾದ ಮಂಟೇಸ್ವಾಮಿ, ಸಿದ್ದಪ್ಪಾಜಿ, ಮಹದೇಶ್ವರ ಸ್ವಾಮಿ ನೆಲೆ ನಿಂತಿರುವ ನಾಡು ಚಾಮರಾಜನಗರ, ಮಂಡ್ಯ, ಮೈಸೂರು ಈ ನೆಲವು ಸಾಕಷ್ಟು ಕಲಾವಿದರನ್ನು ಹುಟ್ಟು ಹಾಕಿ ರಾಷ್ಟ್ರದ್ಯoತ ಈ ನಾಡಿನ ಕಲೆ, ಸಂಸ್ಕೃತಿಯನ್ನು ಪಸರಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಚಿಕ್ಕಲ್ಲೂರು ಕ್ಷೇತ್ರದ ಭಾರತ್ ಪ್ರಭುರಾಜೇ ಅರಸು ಸ್ವಾಮೀಜಿ, ಕಾಡ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಕೊಳ್ಳೇಗಾಲ ಉಪಖಜಾನಾಧಿಕಾರಿ ಪಿ.ನಾಗರತ್ನಮ್ಮ, ಬೆಂಗಳೂರಿನ ಜಾನಪದ ಸಿರಿ ಚಾನೆಲ್ ನ ಕಾಂತರಾಜು, ಜಾನಪದ ಅಕಾಡೆಮಿ ಸದಸ್ಯರಾದ ಉಮೇಶ್, ಸಮಾಜ ಸೇವಕ ಗಿರೀಶ್ ಬಾಬು, ಸರ್ಕಾರಿ ವೈದ್ಯಾಧಿಕಾರಿ ಸಿ.ಮಹೇಶ್, ಹಸಗೂಲಿ ಸಿದ್ದಯ್ಯ, ಗಾಯಕ ಆರ್. ರವಿಕುಮಾರ್, ರಾಚಪ್ಪಾಜಿ ಜಾನಪದ ಕಲಾ ಸಂಘದ ಅಧ್ಯಕ್ಷರಾದ ಆರ್. ಸಿದ್ದರಾಜು, ಕಾರ್ಯದರ್ಶಿ ಬಾಚಹಳ್ಳಿ ಸೋಮಣ್ಣ, ವಕೀಲರಾದ ಸಿದ್ದಯ್ಯ, ಸಿದ್ದೇಶ್, ಸುಭಾಸ್ ಮಾಡ್ರಹಳ್ಳಿ, ಸಾಹಿತಿ ಕಾಳಿಂಗಸ್ವಾಮಿ, ಉಪನ್ಯಾಸಕಿ ಎಸ್. ಶೃತಿ, ಸುರೇಶ ಕಂದೇಗಾಲ, ಎಸ್. ಬಿ. ನಾಗರಾಜ್, ತಂಬೂರಿ ಕಲಾವಿದರಾದ ಚಿಕ್ಕರಂಗಶೆಟ್ಟಿ, ಮಹಾದೇವಯ್ಯ, ಸೋಬಾನೆ ಕಲಾವಿದರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸನ್ಮಾನಿತರು…
ರಾಜ್ಯ ಪ್ರಶಸ್ತಿ ವಿಜೇತರಾದ ದೊಡ್ಡ ಗವಿಬಸಪ್ಪ, ತಂಬೂರಿ ಕಲಾವಿದರಾದ ಸಿದ್ದರಾಜು, ಸಿದ್ದಶೆಟ್ಟಿ, ನಾಗಯ್ಯ, ಸಿದ್ದರಾಜು, ಸಿದ್ದಯ್ಯ, ಗುರುಸಿದ್ಧಯ್ಯ, ಮಹದೇವನಾಯಕ, ಸಿದ್ದರಾಜು, ರಘು, ಕೈಲಾಸಮೂರ್ತಿ, ಶಿವಕುಮಾರ್, ಶ್ರೀನಿವಾಸ, ಮಾದಯ್ಯ, ಹರಳುಕೂಟಯ್ಯ, ಬಸವರಾಜು, ಸೋಬಾನೆ ಕಲಾವಿದರಾದ ದೊಡ್ಡಮ್ಮ, ಬೆಳ್ಳಮ್ಮ, ವೆಂಕಟಮ್ಮ, ಲಕ್ಷ್ಮಮ್ಮ, ರಾಜಮ್ಮ ಅವರನ್ನು ಸನ್ಮಾನಿಸಲಾಯಿತು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…