ಚಾಮರಾಜನಗರ

ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ: ವೆಂಕಟೇಶ್‌ ಬಣ್ಣನೆ

ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಇಂದವಾಡಿ ವೆಂಕಟೇಶ್ ಅಭಿಪ್ರಾಯ

ಗುಂಡ್ಲುಪೇಟೆ: ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಯಾವತ್ತೂ ಸಾವಿಲ್ಲ, ನಾಡಿನಾದ್ಯoತ ತಮ್ಮ ಕಲೆಯನ್ನು ಪಸರಿಸಿರುವ ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರೊ.ಇಂದುವಾಡಿ ವೆಂಕಟೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಶಿಕ್ಷಕರ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಚಪ್ಪಾಜಿ ಜಾನಪದ ಕಲಾಸಂಘದ ವತಿಯಿಂದ ಆಕಾಶವಾಣಿ ‘ಎ’ ಗ್ರೇಡ್ ತಂಬೂರಿ ಕಲಾವಿದರಾದ ದಿ.ಕೆ.ಬಿ. ರಾಚಯ್ಯ ಅವರ 25ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.

ಈ ಮಣ್ಣಿನ ಪರಂಪರೆಯನ್ನು ಎತ್ತಿ ಹಿಡಿಯುತ್ತಿರುವ ಜನಪದ ಕಲಾವಿದರು ನಾಡಿನಾದ್ಯಂತ ಪಸರಿಸಬೇಕು. ಆಕಾಶವಾಣಿ ಎ ಗ್ರೇಡ್ ತಂಬೂರಿ ಹಿರಿಯ ಕಲಾವಿದರಾದ ದಿವಂಗತ ಕೆ.ಬಿ. ರಾಚಯ್ಯನವರಂತೆ ಅವರ ಮಗನಾದ ಸಿದ್ದರಾಜು ಕೂಡ ತಂಬೂರಿ ಕಲಾವಿದರಾಗಿ ಮುಂದುವರಿಯುತ್ತಿರುವುದು ನಿಜಕ್ಕೂ ಶ್ಲಾಘನಿಯ ಎಂದು ಹೇಳಿದರು.

ಈ ನೆಲದ ಮಣ್ಣಿನ ಸೊಗಡೇ ಹಾಗೇ, ಜನಪದವನ್ನು ಉತ್ತಿ ಬೆಳೆಸಿ, ಸಾಕಷ್ಟು ಕಲಾವಿದರನ್ನು ಹುಟ್ಟು ಹಾಕಿದೆ. ಇಂದಿನ ಆಧುನಿಕ ತಂತ್ರಜ್ಞಾನ ಯುಗದ ಭರಾಟೆಯಲ್ಲಿಯೂ ಜನಪದ ಕಲೆಯನ್ನು ಉಳಿಸಿ ಬೆಳೆಸುವಂತಹ ಕೆಲಸ ಹೀಗೆ ಮುಂದುವರಿಯಲಿ ಎಂದು ಹಾರೈಸಿದರು.

ಜಾನಪದ ಅಕಾಡೆಮಿ ಸದಸ್ಯ ಉಮೇಶ್ ಮಾತನಾಡಿ, ಪವಾಡ ಪುರುಷರಾದ ಮಂಟೇಸ್ವಾಮಿ, ಸಿದ್ದಪ್ಪಾಜಿ, ಮಹದೇಶ್ವರ ಸ್ವಾಮಿ ನೆಲೆ ನಿಂತಿರುವ ನಾಡು ಚಾಮರಾಜನಗರ, ಮಂಡ್ಯ, ಮೈಸೂರು ಈ ನೆಲವು ಸಾಕಷ್ಟು ಕಲಾವಿದರನ್ನು ಹುಟ್ಟು ಹಾಕಿ ರಾಷ್ಟ್ರದ್ಯoತ ಈ ನಾಡಿನ ಕಲೆ, ಸಂಸ್ಕೃತಿಯನ್ನು ಪಸರಿಸಿದೆ ಎಂದರು.

 

ಕಾರ್ಯಕ್ರಮದಲ್ಲಿ  ಚಿಕ್ಕಲ್ಲೂರು ಕ್ಷೇತ್ರದ ಭಾರತ್ ಪ್ರಭುರಾಜೇ ಅರಸು ಸ್ವಾಮೀಜಿ, ಕಾಡ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಕೊಳ್ಳೇಗಾಲ ಉಪಖಜಾನಾಧಿಕಾರಿ ಪಿ.ನಾಗರತ್ನಮ್ಮ, ಬೆಂಗಳೂರಿನ ಜಾನಪದ ಸಿರಿ ಚಾನೆಲ್ ನ ಕಾಂತರಾಜು, ಜಾನಪದ ಅಕಾಡೆಮಿ ಸದಸ್ಯರಾದ ಉಮೇಶ್, ಸಮಾಜ ಸೇವಕ ಗಿರೀಶ್ ಬಾಬು, ಸರ್ಕಾರಿ ವೈದ್ಯಾಧಿಕಾರಿ ಸಿ.ಮಹೇಶ್, ಹಸಗೂಲಿ ಸಿದ್ದಯ್ಯ, ಗಾಯಕ ಆರ್. ರವಿಕುಮಾರ್, ರಾಚಪ್ಪಾಜಿ ಜಾನಪದ ಕಲಾ ಸಂಘದ ಅಧ್ಯಕ್ಷರಾದ ಆರ್. ಸಿದ್ದರಾಜು, ಕಾರ್ಯದರ್ಶಿ ಬಾಚಹಳ್ಳಿ ಸೋಮಣ್ಣ, ವಕೀಲರಾದ ಸಿದ್ದಯ್ಯ, ಸಿದ್ದೇಶ್, ಸುಭಾಸ್ ಮಾಡ್ರಹಳ್ಳಿ, ಸಾಹಿತಿ ಕಾಳಿಂಗಸ್ವಾಮಿ, ಉಪನ್ಯಾಸಕಿ ಎಸ್. ಶೃತಿ, ಸುರೇಶ ಕಂದೇಗಾಲ, ಎಸ್. ಬಿ. ನಾಗರಾಜ್, ತಂಬೂರಿ ಕಲಾವಿದರಾದ ಚಿಕ್ಕರಂಗಶೆಟ್ಟಿ, ಮಹಾದೇವಯ್ಯ, ಸೋಬಾನೆ ಕಲಾವಿದರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸನ್ಮಾನಿತರು…

ರಾಜ್ಯ ಪ್ರಶಸ್ತಿ ವಿಜೇತರಾದ ದೊಡ್ಡ ಗವಿಬಸಪ್ಪ, ತಂಬೂರಿ ಕಲಾವಿದರಾದ ಸಿದ್ದರಾಜು, ಸಿದ್ದಶೆಟ್ಟಿ, ನಾಗಯ್ಯ, ಸಿದ್ದರಾಜು, ಸಿದ್ದಯ್ಯ, ಗುರುಸಿದ್ಧಯ್ಯ, ಮಹದೇವನಾಯಕ, ಸಿದ್ದರಾಜು, ರಘು, ಕೈಲಾಸಮೂರ್ತಿ, ಶಿವಕುಮಾರ್, ಶ್ರೀನಿವಾಸ, ಮಾದಯ್ಯ, ಹರಳುಕೂಟಯ್ಯ,  ಬಸವರಾಜು,  ಸೋಬಾನೆ ಕಲಾವಿದರಾದ ದೊಡ್ಡಮ್ಮ, ಬೆಳ್ಳಮ್ಮ, ವೆಂಕಟಮ್ಮ, ಲಕ್ಷ್ಮಮ್ಮ, ರಾಜಮ್ಮ ಅವರನ್ನು ಸನ್ಮಾನಿಸಲಾಯಿತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

12 mins ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

39 mins ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

5 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

9 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

9 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

9 hours ago