ಚಾಮರಾಜನಗರ

ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ: ವೆಂಕಟೇಶ್‌ ಬಣ್ಣನೆ

ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಇಂದವಾಡಿ ವೆಂಕಟೇಶ್ ಅಭಿಪ್ರಾಯ

ಗುಂಡ್ಲುಪೇಟೆ: ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಯಾವತ್ತೂ ಸಾವಿಲ್ಲ, ನಾಡಿನಾದ್ಯoತ ತಮ್ಮ ಕಲೆಯನ್ನು ಪಸರಿಸಿರುವ ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರೊ.ಇಂದುವಾಡಿ ವೆಂಕಟೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಶಿಕ್ಷಕರ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಚಪ್ಪಾಜಿ ಜಾನಪದ ಕಲಾಸಂಘದ ವತಿಯಿಂದ ಆಕಾಶವಾಣಿ ‘ಎ’ ಗ್ರೇಡ್ ತಂಬೂರಿ ಕಲಾವಿದರಾದ ದಿ.ಕೆ.ಬಿ. ರಾಚಯ್ಯ ಅವರ 25ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.

ಈ ಮಣ್ಣಿನ ಪರಂಪರೆಯನ್ನು ಎತ್ತಿ ಹಿಡಿಯುತ್ತಿರುವ ಜನಪದ ಕಲಾವಿದರು ನಾಡಿನಾದ್ಯಂತ ಪಸರಿಸಬೇಕು. ಆಕಾಶವಾಣಿ ಎ ಗ್ರೇಡ್ ತಂಬೂರಿ ಹಿರಿಯ ಕಲಾವಿದರಾದ ದಿವಂಗತ ಕೆ.ಬಿ. ರಾಚಯ್ಯನವರಂತೆ ಅವರ ಮಗನಾದ ಸಿದ್ದರಾಜು ಕೂಡ ತಂಬೂರಿ ಕಲಾವಿದರಾಗಿ ಮುಂದುವರಿಯುತ್ತಿರುವುದು ನಿಜಕ್ಕೂ ಶ್ಲಾಘನಿಯ ಎಂದು ಹೇಳಿದರು.

ಈ ನೆಲದ ಮಣ್ಣಿನ ಸೊಗಡೇ ಹಾಗೇ, ಜನಪದವನ್ನು ಉತ್ತಿ ಬೆಳೆಸಿ, ಸಾಕಷ್ಟು ಕಲಾವಿದರನ್ನು ಹುಟ್ಟು ಹಾಕಿದೆ. ಇಂದಿನ ಆಧುನಿಕ ತಂತ್ರಜ್ಞಾನ ಯುಗದ ಭರಾಟೆಯಲ್ಲಿಯೂ ಜನಪದ ಕಲೆಯನ್ನು ಉಳಿಸಿ ಬೆಳೆಸುವಂತಹ ಕೆಲಸ ಹೀಗೆ ಮುಂದುವರಿಯಲಿ ಎಂದು ಹಾರೈಸಿದರು.

ಜಾನಪದ ಅಕಾಡೆಮಿ ಸದಸ್ಯ ಉಮೇಶ್ ಮಾತನಾಡಿ, ಪವಾಡ ಪುರುಷರಾದ ಮಂಟೇಸ್ವಾಮಿ, ಸಿದ್ದಪ್ಪಾಜಿ, ಮಹದೇಶ್ವರ ಸ್ವಾಮಿ ನೆಲೆ ನಿಂತಿರುವ ನಾಡು ಚಾಮರಾಜನಗರ, ಮಂಡ್ಯ, ಮೈಸೂರು ಈ ನೆಲವು ಸಾಕಷ್ಟು ಕಲಾವಿದರನ್ನು ಹುಟ್ಟು ಹಾಕಿ ರಾಷ್ಟ್ರದ್ಯoತ ಈ ನಾಡಿನ ಕಲೆ, ಸಂಸ್ಕೃತಿಯನ್ನು ಪಸರಿಸಿದೆ ಎಂದರು.

 

ಕಾರ್ಯಕ್ರಮದಲ್ಲಿ  ಚಿಕ್ಕಲ್ಲೂರು ಕ್ಷೇತ್ರದ ಭಾರತ್ ಪ್ರಭುರಾಜೇ ಅರಸು ಸ್ವಾಮೀಜಿ, ಕಾಡ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಕೊಳ್ಳೇಗಾಲ ಉಪಖಜಾನಾಧಿಕಾರಿ ಪಿ.ನಾಗರತ್ನಮ್ಮ, ಬೆಂಗಳೂರಿನ ಜಾನಪದ ಸಿರಿ ಚಾನೆಲ್ ನ ಕಾಂತರಾಜು, ಜಾನಪದ ಅಕಾಡೆಮಿ ಸದಸ್ಯರಾದ ಉಮೇಶ್, ಸಮಾಜ ಸೇವಕ ಗಿರೀಶ್ ಬಾಬು, ಸರ್ಕಾರಿ ವೈದ್ಯಾಧಿಕಾರಿ ಸಿ.ಮಹೇಶ್, ಹಸಗೂಲಿ ಸಿದ್ದಯ್ಯ, ಗಾಯಕ ಆರ್. ರವಿಕುಮಾರ್, ರಾಚಪ್ಪಾಜಿ ಜಾನಪದ ಕಲಾ ಸಂಘದ ಅಧ್ಯಕ್ಷರಾದ ಆರ್. ಸಿದ್ದರಾಜು, ಕಾರ್ಯದರ್ಶಿ ಬಾಚಹಳ್ಳಿ ಸೋಮಣ್ಣ, ವಕೀಲರಾದ ಸಿದ್ದಯ್ಯ, ಸಿದ್ದೇಶ್, ಸುಭಾಸ್ ಮಾಡ್ರಹಳ್ಳಿ, ಸಾಹಿತಿ ಕಾಳಿಂಗಸ್ವಾಮಿ, ಉಪನ್ಯಾಸಕಿ ಎಸ್. ಶೃತಿ, ಸುರೇಶ ಕಂದೇಗಾಲ, ಎಸ್. ಬಿ. ನಾಗರಾಜ್, ತಂಬೂರಿ ಕಲಾವಿದರಾದ ಚಿಕ್ಕರಂಗಶೆಟ್ಟಿ, ಮಹಾದೇವಯ್ಯ, ಸೋಬಾನೆ ಕಲಾವಿದರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸನ್ಮಾನಿತರು…

ರಾಜ್ಯ ಪ್ರಶಸ್ತಿ ವಿಜೇತರಾದ ದೊಡ್ಡ ಗವಿಬಸಪ್ಪ, ತಂಬೂರಿ ಕಲಾವಿದರಾದ ಸಿದ್ದರಾಜು, ಸಿದ್ದಶೆಟ್ಟಿ, ನಾಗಯ್ಯ, ಸಿದ್ದರಾಜು, ಸಿದ್ದಯ್ಯ, ಗುರುಸಿದ್ಧಯ್ಯ, ಮಹದೇವನಾಯಕ, ಸಿದ್ದರಾಜು, ರಘು, ಕೈಲಾಸಮೂರ್ತಿ, ಶಿವಕುಮಾರ್, ಶ್ರೀನಿವಾಸ, ಮಾದಯ್ಯ, ಹರಳುಕೂಟಯ್ಯ,  ಬಸವರಾಜು,  ಸೋಬಾನೆ ಕಲಾವಿದರಾದ ದೊಡ್ಡಮ್ಮ, ಬೆಳ್ಳಮ್ಮ, ವೆಂಕಟಮ್ಮ, ಲಕ್ಷ್ಮಮ್ಮ, ರಾಜಮ್ಮ ಅವರನ್ನು ಸನ್ಮಾನಿಸಲಾಯಿತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago