ಚಾಮರಾಜನಗರ

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ತೊಟ್ಟಿಲು ಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದ ವಿಶೇಷ ಪೂಜೆಯಲ್ಲಿ ಚಲನಚಿತ್ರ ನಟಿ ತಾರಾ ಹಾಗೂ ನಟ ಶಶಿಕುಮಾರ್ ಭಾಗವಹಿಸಿದ್ದರು.

ಈ ವೇಳೆ ಚಲನಚಿತ್ರ ನಟ ಶಶಿಕುಮಾರ್ ಮಾತನಾಡಿ, ದೊಡ್ಡಾಲತ್ತೂರು ಗ್ರಾಮದ ಬೆಟ್ಟದ ಶಂಕರಪ್ಪರವರು ಮಕ್ಕಳಿಲ್ಲದ ಹೆಣ್ಣು ಮಕ್ಕಳಿಗೆ ಗಿಡಮೂಲಿಕೆಗಳಿಂದ ತಯಾರಿಸಲ್ಪಟ್ಟ ನಾಟಿ ಔಷಧಿಯನ್ನು ಕೊಟ್ಟು ಹಲವಾರು ವರ್ಷಗಳಿಂದ ತೊಟ್ಟಿಲು ಪೂಜೆ ಮಾಡಿಸಿಕೊಂಡು ಹೋಗಿರುವ ಸಾವಿರಾರು ಹೆಣ್ಣು ಮಕ್ಕಳಿಗೆ ಮಕ್ಕಳಾಗಿರುವುದು ಸಂತಸದ ವಿಚಾರ ಎಂದರು.

ಬೆಟ್ಟದ ಶಂಕರಪ್ಪನವರು ಮಕ್ಕಳಿಲ್ಲದ ಹೆಣ್ಣು ಮಕ್ಕಳಿಗೆ ಹಲವಾರು ವರ್ಷಗಳಿಂದ ನಾಟಿ ಔಷಧ ಕೊಡುತ್ತಾ ಬಂದಿದ್ದಾರೆ. ವೈದ್ಯರು ಮಕ್ಕಳೇ ಆಗುವುದಿಲ್ಲವೆಂದು ಹೇಳಿದ್ದರೂ ದಂಪತಿಗಳು ಈ ಕ್ಷೇತ್ರಕ್ಕೆ ಬಂದು ಔಷಧಿ ಪಡೆದುಕೊಂಡು ಮಕ್ಕಳಾಗಿರುವ ಹಲವು ನಿರ್ದೇಶನಗಳಿವೆ ಎಂದರು.

ಚಲನಚಿತ್ರ ನಟಿ ತಾರಾ ಮಾತನಾಡಿ, ಒಬ್ಬ ಹೆಣ್ಣು ಮಗಳು ತಾಯಿಯಾದಾಗ ಅದರಲ್ಲಿ ಸಿಗುವ ಸಂತೋಷ ಎಲ್ಲಿಯೂ ಸಿಗುವುದಿಲ್ಲ. ಬೆಟ್ಟದ ಶಂಕರಪ್ಪರವರು ಮಕ್ಕಳಾಗದವರಿಗೆ ನಾಟಿ ಗಿಡಮೂಲಿಕೆಗಳಿಂದ ತಯಾರಿಸಲ್ಪಟ್ಟ ನಾಟಿ ಔಷಧಿಯನ್ನು ಕೊಟ್ಟು ತೊಟ್ಟಿಲು ಪೂಜೆ ಮಾಡಿಸಿದ ನಂತರ ಹೆಣ್ಣುಮಕ್ಕಳಿಗೆ ಮಕ್ಕಳಾಗಿದೆ. ಅವರು ನಿಸ್ವಾರ್ಥದಿಂದ ತಮ್ಮ ಹಿರಿಯರು ಮಾಡಿಕೊಂಡು ಬಂದಿರುವ ಸೇವೆಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಇವರ ಸೇವೆ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು.

ಬೆಟ್ಟದ ಶಂಕರಪ್ಪ ಮಾತನಾಡಿ, ತಾಯ್ತನ ಎಂಬುದು ಎಲ್ಲರಿಗೂ ಸಿಗುವುದಿಲ್ಲ, ಹಲವಾರು ವರ್ಷಗಳ ಕಾಲ ಮಕ್ಕಳಿಲ್ಲದೆ ನಮ್ಮ ಬಳಿ ತಮ್ಮ ಕಷ್ಟ ಹೇಳಿಕೊಂಡು ಬಂದಂತಹ ದಂಪತಿಗಳಿಗೆ ಧೈರ್ಯ ತುಂಬಿ ನಾಟಿ ಔಷಧಿ ನೀಡಿ ತೊಟ್ಟಿಲು ಪೂಜೆ ಮಾಡಿಸಿ ಕಳುಹಿಸಿದ್ದು, ಸಾವಿರಾರು ಮಂದಿಗೆ ಮಕ್ಕಳಾಗಿದೆ. ಮಕ್ಕಳಾದ ನಂತರ ನಮ್ಮ ಮಕ್ಕಳೇಶ್ವರ ಸ್ವಾಮಿ ಪುಣ್ಯಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿಕೊಂಡು ಹೋಗುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ದಂಪತಿಗಳು, ಕುಟುಂಬಸ್ಥರು, ಗ್ರಾಮಸ್ಥರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

3 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

3 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

3 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

3 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

3 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

3 hours ago