ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ತೊಟ್ಟಿಲು ಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದ ವಿಶೇಷ ಪೂಜೆಯಲ್ಲಿ ಚಲನಚಿತ್ರ ನಟಿ ತಾರಾ ಹಾಗೂ ನಟ ಶಶಿಕುಮಾರ್ ಭಾಗವಹಿಸಿದ್ದರು.
ಈ ವೇಳೆ ಚಲನಚಿತ್ರ ನಟ ಶಶಿಕುಮಾರ್ ಮಾತನಾಡಿ, ದೊಡ್ಡಾಲತ್ತೂರು ಗ್ರಾಮದ ಬೆಟ್ಟದ ಶಂಕರಪ್ಪರವರು ಮಕ್ಕಳಿಲ್ಲದ ಹೆಣ್ಣು ಮಕ್ಕಳಿಗೆ ಗಿಡಮೂಲಿಕೆಗಳಿಂದ ತಯಾರಿಸಲ್ಪಟ್ಟ ನಾಟಿ ಔಷಧಿಯನ್ನು ಕೊಟ್ಟು ಹಲವಾರು ವರ್ಷಗಳಿಂದ ತೊಟ್ಟಿಲು ಪೂಜೆ ಮಾಡಿಸಿಕೊಂಡು ಹೋಗಿರುವ ಸಾವಿರಾರು ಹೆಣ್ಣು ಮಕ್ಕಳಿಗೆ ಮಕ್ಕಳಾಗಿರುವುದು ಸಂತಸದ ವಿಚಾರ ಎಂದರು.
ಬೆಟ್ಟದ ಶಂಕರಪ್ಪನವರು ಮಕ್ಕಳಿಲ್ಲದ ಹೆಣ್ಣು ಮಕ್ಕಳಿಗೆ ಹಲವಾರು ವರ್ಷಗಳಿಂದ ನಾಟಿ ಔಷಧ ಕೊಡುತ್ತಾ ಬಂದಿದ್ದಾರೆ. ವೈದ್ಯರು ಮಕ್ಕಳೇ ಆಗುವುದಿಲ್ಲವೆಂದು ಹೇಳಿದ್ದರೂ ದಂಪತಿಗಳು ಈ ಕ್ಷೇತ್ರಕ್ಕೆ ಬಂದು ಔಷಧಿ ಪಡೆದುಕೊಂಡು ಮಕ್ಕಳಾಗಿರುವ ಹಲವು ನಿರ್ದೇಶನಗಳಿವೆ ಎಂದರು.
ಚಲನಚಿತ್ರ ನಟಿ ತಾರಾ ಮಾತನಾಡಿ, ಒಬ್ಬ ಹೆಣ್ಣು ಮಗಳು ತಾಯಿಯಾದಾಗ ಅದರಲ್ಲಿ ಸಿಗುವ ಸಂತೋಷ ಎಲ್ಲಿಯೂ ಸಿಗುವುದಿಲ್ಲ. ಬೆಟ್ಟದ ಶಂಕರಪ್ಪರವರು ಮಕ್ಕಳಾಗದವರಿಗೆ ನಾಟಿ ಗಿಡಮೂಲಿಕೆಗಳಿಂದ ತಯಾರಿಸಲ್ಪಟ್ಟ ನಾಟಿ ಔಷಧಿಯನ್ನು ಕೊಟ್ಟು ತೊಟ್ಟಿಲು ಪೂಜೆ ಮಾಡಿಸಿದ ನಂತರ ಹೆಣ್ಣುಮಕ್ಕಳಿಗೆ ಮಕ್ಕಳಾಗಿದೆ. ಅವರು ನಿಸ್ವಾರ್ಥದಿಂದ ತಮ್ಮ ಹಿರಿಯರು ಮಾಡಿಕೊಂಡು ಬಂದಿರುವ ಸೇವೆಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಇವರ ಸೇವೆ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು.
ಬೆಟ್ಟದ ಶಂಕರಪ್ಪ ಮಾತನಾಡಿ, ತಾಯ್ತನ ಎಂಬುದು ಎಲ್ಲರಿಗೂ ಸಿಗುವುದಿಲ್ಲ, ಹಲವಾರು ವರ್ಷಗಳ ಕಾಲ ಮಕ್ಕಳಿಲ್ಲದೆ ನಮ್ಮ ಬಳಿ ತಮ್ಮ ಕಷ್ಟ ಹೇಳಿಕೊಂಡು ಬಂದಂತಹ ದಂಪತಿಗಳಿಗೆ ಧೈರ್ಯ ತುಂಬಿ ನಾಟಿ ಔಷಧಿ ನೀಡಿ ತೊಟ್ಟಿಲು ಪೂಜೆ ಮಾಡಿಸಿ ಕಳುಹಿಸಿದ್ದು, ಸಾವಿರಾರು ಮಂದಿಗೆ ಮಕ್ಕಳಾಗಿದೆ. ಮಕ್ಕಳಾದ ನಂತರ ನಮ್ಮ ಮಕ್ಕಳೇಶ್ವರ ಸ್ವಾಮಿ ಪುಣ್ಯಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿಕೊಂಡು ಹೋಗುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ದಂಪತಿಗಳು, ಕುಟುಂಬಸ್ಥರು, ಗ್ರಾಮಸ್ಥರು ಹಾಜರಿದ್ದರು.
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…