Teak wood collected without permission: Seizure by the Forest Department
ಗುಂಡ್ಲುಪೇಟೆ : ಅಕ್ರಮವಾಗಿ ಕೊಯ್ದು ಸಂಗ್ರಹಿಸಿದ್ದ ತೇಗದ ಮರಗಳನ್ನು ಅರಣ್ಯ ಇಲಾಖೆಯು ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಅಣ್ಣೂರು ಗ್ರಾಮದ ಜಮೀನಿನಲ್ಲಿ ನಡೆದಿದೆ.
ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸುನಿಲ್ರವರ ಜಮೀನಿನಲ್ಲಿ ಮಾದಪ್ಪ ಎಂಬವರು ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಬೇರೆಡೆ ತೇಗದ ಮರಗಳನ್ನು ಖರೀದಿಸಿ ಕೊಯ್ದು ಸಂಗ್ರಹಿಸಿಟ್ಟಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ಅರಣ್ಯಾಧಿಕಾರಿ ಶಿವಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿ, ಸಂಗ್ರಹಿಸಿದ್ದ ತೇಗದ ಮರಗಳನ್ನು ಜಪ್ತಿ ಮಾಡಿದ್ದಾರೆ.
ಅನುಮತಿ ಪಡೆಯದ ಹಿನ್ನೆಲೆಯಲ್ಲಿ 10ಕ್ಕೂ ಅಧಿಕ ತೇಗದ ಮರಗಳನ್ನು ಜಪ್ತಿ ಮಾಡಲಾಗಿದ್ದು, ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಬಫರ್ ಜೊನ್ ವಲಯ ಅರಣ್ಯಧಿಕಾರಿ ಶಿವಕುಮಾರ್ ತಿಳಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…